| ವಾಲ್ಮೀಕಿ ನಿಗಮ ಹಗರಣಕ್ಕೆ ಸಿಎಂ ನೇರ ಕಾರಣ : ಪ್ರಹ್ಲಾದ್ ಜೋಶಿ | |
| ಬೆಂಗಳೂರು,ಜೂ.22-ವಾಲೀಕಿ ಅಭಿವೃದ್ಧಿ ನಿಗಮ ಮಂಡಳಿಯಲ್ಲಿ ನಡೆದಿರುವ ನೂರಾರು ಕೋಟಿ ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. | |
| ನಗರದ ಅರಮನೆ ಮೈದಾನದಲ್ಲಿ ಪಕ್ಷದ ವತಿಯಿಂದ ಹಮಿಕೊಂಡಿದ್ದ ನೂತನ ಸಂಸದರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಒಬ್ಬನೇ ಜಗತ್ತಿನಲ್ಲಿ ಮಹಾ ಸಾಚಾ ಎಂದು ಸಿದ್ದರಾಮಯ್ಯನವರು ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. | |
| ಹಣಕಾಸು ಇಲಾಖೆ ಯಾರ ಕೈಯಲ್ಲಿದೆ. ನಿಮ ಅನುಮತಿ ಇಲ್ಲದೆ ನಿಗಮದ ಹಣವು ಸಚಿವರೊಬ್ಬರ ಖಾತೆಗೆ ವರ್ಗಾವಣೆಯಾಗಲು ಹೇಗೆ ಸಾಧ್ಯ. ಈ ನಿಗಮದಲ್ಲಿ ನಡೆದಿರುವ ಎಲ್ಲಾ ಅಕ್ರಮಗಳಿಗೂ ಸಿದ್ದರಾಮಯ್ಯನವರೇ ನೇರ ಕಾರಣ ಎಂದು ಆರೋಪಿಸಿದರು. | |
| ಬಿಜೆಪಿ ನೇತೃತ್ವದ ಎನ್ಡಿಗೆ ಜನರು 54% ಮತ ಕೊಟ್ಟು ಕಾಂಗ್ರೆಸ್ನ್ನು ತಿರಸ್ಕರಿಸಿದ್ದಾರೆ. ಅದರ ದ್ವೇಷಕ್ಕಾಗಿಯೇ ಕಾಂಗ್ರೆಸ್ ಸರ್ಕಾರ ದೊಡ್ಡ ಪ್ರಮಾಣದಲ್ಲಿ ಬೆಲೆ ಏರಿಕೆ ಮಾಡಿದೆ. ಬೇರೆ ರಾಜ್ಯಗಳ ಹೋಲಿಕೆ ಮಾಡಿ ಅದರ ಸಮರ್ಥನೆ ಮಾಡಿಕೊಳ್ಳುತ್ತಿದೆ ಎಂದರು. | |
| ಅರೆ ಬೆಂದ ಗ್ಯಾರಂಟಿಗಳನ್ನು ಕೊಟ್ಟು, ಅದಕ್ಕಾಗಿ ತೈಲ ಬೆಲೆ ಏರಿಸಿ ಮತ್ತಷ್ಟು ಬೆಲೆಗಳು ಏರಿಕೆ ಮಾಡುವಂತೆ ಮಾಡಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಬೆಲೆ ಏರಿಕೆ ಮಾಡಿ ಜನರಿಗೆ ಬರೆ ಹಾಕಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ ಎಂದು ವಾಗ್ದಾಳಿ ನಡೆಸಿದರು. | |
| ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಈ ಚುನಾವಣೆಯಲ್ಲಿ ಸೋಶಿಯಲ್ ಮೀಡಿಯಾಗಳು ನಮ ವಿರುದ್ದ ಇದ್ದವು. ಆದಾಗ್ಯೂ ಮತದಾರರು ಕಾಂಗ್ರೆಸ್ನ್ನು ಸಿಂಗಲ್ ಡಿಜಿಟ್ಗೆ ತಂದು ನಿಲ್ಲಿಸಿದ್ದಾರೆ. ತಾಲ್ಲೂಕು ಪಂಚಾಯತ್ ಚುನಾವಣೆ ಆಗಲಿ, ಜಿಪಂ ಚುನಾವಣೆ ಆಗಲಿ ಕಾಂಗ್ರೆಸ್ನ್ನು ಮನೆಗೆ ಕಳಿಸಬೇಕು ಎಂದು ಕರೆ ನೀಡಿದರು. | |
| ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರವಾಗಿದೆ. ಸಿಎಂ, ಡಿಸಿಎಂ ರಾಜೀನಾಮೆ ಕೊಡೋವರೆಗೂ ಹೋರಾಟ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. |