text
stringlengths
0
61.5k
Team Udayavani, Nov 13, 2019, 5:37 AM IST
19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.
ಶಾಲೆ ಸ್ಥಾಪನೆ 1890
ದಿ | ಧೂಮಪ್ಪ ಮಾಸ್ಟರ್‌ ಅವರ ಮನೆಯಿಂದ ಪ್ರಾರಂಭ
ಪಡುಬಿದ್ರಿ: ಅತ್ಯಂತ ಗ್ರಾಮೀಣ ಪ್ರದೇಶದಲ್ಲಿ ಎಲ್ಲೂರು ಸುತ್ತಮುತ್ತಲಿನ ಗ್ರಾಮದ ಸಹಸ್ರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನವನ್ನು ಗೈದು ಇಂದಿಗೂ ಆಂಗ್ಲ ಮಾಧ್ಯಮ ಹಾವಳಿಯ ಮದ್ಯೆ ತಲೆ ಎತ್ತಿ ನಿಂತಿರುವ ಕನ್ನಡ ಮಾಧ್ಯಮದ ಕೆಮುಂಡೇಲು ಅನುದಾನಿತ ಹಿ. ಪ್ರಾ. ಶಾಲೆಯು 129ವರ್ಷಗಳ ಸಾರ್ಥಕತೆಯೊಂದಿಗೆ ಗಮನೀಯವಾಗಿ ಮುಂದುವರಿದಿದೆ.
ಉಡುಪಿ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಂತಹಾ ಚುರುಕುಮತಿಯ ಸಂತನಿಗೆ ಪೂರ್ವಾಶ್ರಮದ ಹಯವದನನಾಗಿರುತ್ತಲೇ ಅಕ್ಷರ ಜ್ಞಾನವನ್ನು ಬೋಧಿಸಿದ ವಿದ್ಯಾದೇಗುಲವಿದು. ಇದೀಗ ಅಂತಹಾ ಅಸಾಮಾನ್ಯ ಸಂತನೇ ತಾನೋದಿದ ಶಾಲೆಯನ್ನು ಶ್ರೀ ಪೂರ್ಣ ಟ್ರಸ್ಟ್‌ ಮೂಲಕ 2010ರಲ್ಲಿ ಖರೀದಿಸಿ ಸುಮಾರು 1ಕೋಟಿಗೂ ಮಿಕ್ಕಿ ಧನರಾಶಿಯನ್ನು ಶಾಲೆಯ ಅಭಿವೃದ್ದಿಗಾಗಿ ಪೋಣಿಸಿದ್ದಾರೆ.
ಶಾಲೆಯ ವಿವಿಧ ಸಾಧಕರು
ವಿಶ್ವ ವಿಖ್ಯಾತಿಯನ್ನೂ ಪಡೆದಿರುವ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಸಹಿತ ನಂದಿಕೂರು ಜನ ಜಾಗೃತಿ ಸಮಿತಿಯ ಗೌರವಾಧ್ಯಕ್ಷ, ದುಬೈ ಉದ್ಯಮಿ ಬಾಲಕೃಷ್ಣ ಶೆಟ್ಟಿ, ಉಡುಪಿಯ ಖ್ಯಾತ ನ್ಯಾಯವಾದಿ ಪ್ರದೀಪ್‌ ಕುಮಾರ್‌, ಖ್ಯಾತ ಹೃದ್ರೋಗ ತಜ್ಞ ಡಾ | ಕೆ. ಜಿ.ಸುರೇಶ್‌ ರಾವ್‌, ವೈದ್ಯಕೀಯ ಕ್ಷೇತ್ರದಲ್ಲಿನ ಡಾ | ಭವಾನಿ ಶಂಕರ್‌, ಡಾ | ಹಿಲ್ಡಾ ಫೆರ್ನಾಂಡಿಸ್‌, ಆಕಾಶವಾಣಿಯ ಕಾನ್ಸೆಪಾr ಫೆರ್ನಾಂಡಿಸ್‌ ಸಹಿತ ವಿವಿದೆಡೆಗಳಲ್ಲಿ ಈ ಶಾಲಾ ಹಳೆ ವಿದ್ಯಾರ್ಥಿಗಳು ಇನ್ನಷ್ಟು ಕ್ಷೇತ್ರದಲ್ಲಿ ಹೆಸರುವಾಸಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಪ್ರಸ್ತುತ 116 ವಿದ್ಯಾರ್ಥಿಗಳು
ಕೆಮುಂಡೇಲು ಶಾಲೆಯು ಕೇವಲ 9ವಿದ್ಯಾರ್ಥಿಗಳಿಂದ ದಿ | ಧೂಮಪ್ಪ ಮಾಸ್ಟರ್‌ ಅವರ ಮನೆಯಿಂದ ಆರಂಭಗೊಂಡಿತ್ತು. ಮುಂದೆ 380 ವಿದ್ಯಾರ್ಥಿಗಳು 8 ಶಿಕ್ಷಕರ ಸಹಿತ ಉಚ್ಛ್ರಾಯ ಸ್ತಿತಿಯಲ್ಲಿದ್ದ ಈ ಶಾಲೆಯು ಕಾಲ ಗತಿಯಲ್ಲಿ 32 ವಿದ್ಯಾರ್ಥಿ ಬಲವನ್ನು ಹೊಂದಿದ್ದಾಗ ಅನಿವಾರ್ಯವಾಗಿ ಶ್ರೀ ಸುಗುಣೇಂದ್ರ ತೀರ್ಥರ ತೆಕ್ಕೆಗೆ ಈ ಶಾಲೆ ಸೇರಿಕೊಂಡಿತು. ಮುಂದೆ 2015ರಲ್ಲಿ 80ವಿದ್ಯಾರ್ಥಿಗಳ ಸಂಖ್ಯೆಯನ್ನು ಹೊಂದಿ ಇದೀಗ 116ಸಂಖ್ಯಾಬಲದೊಂದಿಗೆ ಮುನ್ನಡೆದಿದೆ.
ಮಠದಿಂದಲೇ ಗೌರವ ಧನ
ಅನುದಾನಿತ ಶಾಲೆಯಾದರೂ ಯಾವುದೇ ಸರಕಾರಿ ಸಂಬಳ ಪಡೆವ ಶಿಕ್ಷಕರಿಲ್ಲಿಲ್ಲ. ಪುತ್ತಿಗೆ ಮಠದಿಂದಲೇ ಗೌರವ ಧನದ ಸಂಭಾವನೆಯನ್ನು ಪಡೆಯುತ್ತಾ 7ಮಂದಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಬೋಧಿಸುತ್ತಿರುವುದೂ ಅತಿಶಯೋಕ್ತಿಯಲ್ಲ.
ಶ್ರೀ ಪುತ್ತಿಗೆ ಮಠದಿಂದಲೇ ನಡೆಸಲ್ಪಡುತ್ತಿರುವ ಶಾಲೆಯಲ್ಲಿ 80 ವಿದ್ಯಾರ್ಥಿ ಗಳಿದ್ದಾಗ ಈ ಶಾಲೆಗೆ ಸೇರಿಕೊಂಡಿದ್ದೆ. ಶಾಲೆಗೆ ವಾಹನವೊಂದನ್ನೂ ಶ್ರೀಗಳು ಹೊಂದಿಸಿಕೊಟ್ಟಿದ್ದಾರೆ. ಒಂದನೇ ತರಗತಿಗೆ ಪ್ರತಿಬಾರಿ ಸುಮಾರು 25ವಿದ್ಯಾರ್ಥಿಗಳ ಸೇರ್ಪಡೆಯಾಗುತ್ತಿದ್ದು ಅವರೆಲ್ಲರ ಹೆಸರಲ್ಲಿ ರಾಷ್ಟ್ರೀಕೃತ ಬ್ಯಾಂಕಲ್ಲಿ ತಲಾ 2000ರೂ. ಗಳ ಠೇವಣಿಯನ್ನು ನಾನೇ ಮಾಡುತ್ತಿರುವೆನು. ಇದು ವಿದ್ಯಾರ್ಥಿಯು 10ನೇ ತರಗತಿಯನ್ನು ತೇರ್ಗಡೆ ಹೊಂದಿದಾಗ ಅವನ ಕೈ ಸೇರುತ್ತದೆ. ವಿದ್ಯಾರ್ಥಿ ಸಂಖ್ಯೆಯನ್ನು ಹೆಚ್ಚಿಸುವ ಪ್ರೋತ್ಸಾಹಕ ಕ್ರಮವಾಗಿ ಇದನ್ನು ಮುಂದುವರಿಸಿದ್ದೇನೆ.
– ಜಗನ್ನಾಥ ಶೆಟ್ಟಿ, ಮುಖ್ಯ ಶಿಕ್ಷಕ
ಶಾಲೆ ಮುಚ್ಚುವ ಹಂತದಲ್ಲಿದ್ದಾಗ ತಮ್ಮ ಜೀವಿತಾವಧಿಯಲ್ಲಿ ತೆರೆಗೆ ಸರಿದು ಹೋಗಕೂಡದು ಎಂಬ ದೃಷ್ಟಿಯಿಂದ ನಾವೇ ಖರೀದಿಸಿದ್ದೇವೆ. ಇದೀಗ ಶಾಲಾಭಿವೃದ್ದಿಗೆ ಸುಮಾರು 2ಕೋಟಿ ರೂ. ವೆಚ್ಚದಲ್ಲಿ ಹೊಸ ಕಟ್ಟಡದ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಇದನ್ನು ಮುಂದೆ ಹಳೆ ವಿದ್ಯಾರ್ಥಿಗಳು, ವಿದ್ಯಾಪ್ರೇಮಿಗಳ ಸಹಕಾರದೊಂದಿಗೆಪೂರೈಸಲಾಗುವುದೆಂದಿದ್ದಾರೆ.
ಆನ್ಲೈನ್ ಉಚಿತ ವಾಸ್ತವ ಯೊರುಬಾ ಕೀಬೋರ್ಡ್ ಲೇಔಟ್ | Loderi.com
ವರ್ಚುವಲ್ ಯೊರುಬಾ ಕೀಬೋರ್ಡ್ ಆನ್ಲೈನ್
ನೀವು ಆನ್ಲೈನ್ ಯೊರುಬಾ ಟೇಪ್ ಏನೋ ಮಾತಾಡಿ, ಆದರೆ ಒಂದು ಕಂಪ್ಯೂಟರ್ ಅಥವಾ ಲ್ಯಾಪ್ಟಾಪ್ ಇಂಗ್ಲೀಷ್ ಲೇಔಟ್ - ನಿಮ್ಮ ಕಂಪ್ಯೂಟರ್ ಪರದೆಯ ಮೇಲೆ ಒಂದು ವಾಸ್ತವ ಯೊರುಬಾ ಕೀಬೋರ್ಡ್ ಅಗತ್ಯವಿದೆ. ಇದು ಬಳಸಲು ಸುಲಭ ಮತ್ತು ಅನುಕೂಲಕರ. ಸೈಟ್ನಲ್ಲಿ ನೀವು ಇಷ್ಟಪಡುವುದಿಲ್ಲ ಅಥವಾ ಏನೋ ಕೆಲಸ ಅಥವಾ ನಿಜವಲ್ಲ ಏನೋ ವೇಳೆ - ನಮಗೆ ತಿಳಿಸಿ. ಇದು ನಮಗೆ ಬಹಳ ಮುಖ್ಯ. Loderi.com ಯೊರುಬಾ ವಾಸ್ತವ ಕೀಬೋರ್ಡ್ ಬಳಸಿ, ನೀವು ಸಂಪೂರ್ಣವಾಗಿ ಉಚಿತ ಮತ್ತು ಆನ್ಲೈನ್: • ನೆಚ್ಚಿನ ಯೊರುಬಾ ಭಾಷೆ ಆನ್ಲೈನ್ ಟೈಪ್; • ನೇರವಾಗಿ ನಮ್ಮ ಸೈಟ್ನಿಂದ ಸ್ನೇಹಿತರು ಸಂದೇಶಗಳನ್ನು ಕಳುಹಿಸಲು; • 1 ಕ್ಲಿಕ್ ಗೂಗಲ್ ಮತ್ತು YouTube ನಲ್ಲಿ ಹುಡುಕಾಟ (ಹೊಸ ಕಿಟಕಿಯಲ್ಲಿ ತೆರೆದುಕೊಳ್ಳುತ್ತದೆ) • (ಹೊಸ ಕಿಟಕಿಯಲ್ಲಿ ತೆರೆದುಕೊಳ್ಳುತ್ತದೆ) ಒಂದು ಕ್ಲಿಕ್ ರಲ್ಲಿ ಗೂಗಲ್ ಅನುವಾದಕ ಬಳಸಿಕೊಂಡು ಅನುವಾದ • ಫೇಸ್ಬುಕ್ ಮೇಲೆ ಪೋಸ್ಟ್ ಮಾಡಲು ಮತ್ತು ಟ್ವಿಟರ್ ನಲ್ಲಿ ಟ್ವೀಟ್; • ನಂತರ ಬರೆಯುವ ಮುಂದುವರಿಸಲು ನಿಮ್ಮ ಟಿಪ್ಪಣಿಗಳನ್ನು ಉಳಿಸಿ (ನೀವು ಲಾಗಿನ್ ಅಗತ್ಯವಿದೆ); • ಡೌನ್ಲೋಡ್ ಮತ್ತು ನಿಮ್ಮ ಡಾಕ್ಯುಮೆಂಟ್ಗಳನ್ನು ಮುದ್ರಿಸಲು.
ವಾಸ್ತವ ಕೀಲಿಮಣೆಯಲ್ಲಿ ಟೈಪ್ ಯೊರುಬಾ - ಇದು ಉಚಿತ ಮತ್ತು ಸುಲಭ
ನಾವು ದೀರ್ಘಕಾಲ ವಿಂಡೋಸ್ ಸೈಟ್ ಇಂಟರ್ಫೇಸ್ ಮತ್ತು ನಿಮ್ಮ ಅನುಕೂಲಕ್ಕಾಗಿ ಯೊರುಬಾ ಕೀಬೋರ್ಡ್ ಲೇಔಟ್ ಪರೀಕ್ಷಿಸಲಾಯಿತು. ನಿಮ್ಮ ಮಾನಿಟರ್ ನ ಪರದೆಯ ಮೇಲೆ ಆನ್ಲೈನ್ ನಮ್ಮ ಯೊರುಬಾ ಕೀಲಿಮಣೆಯಲ್ಲಿ ಟೈಪ್ ಮಾಡಿದಾಗ ಮತ್ತು ಈಗ ನಾವು ನಿಮ್ಮ ಆರಾಮ ಭರವಸೆಯಲ್ಲಿದ್ದಾರೆ. ಇಲ್ಲಿ ನೀವು ಆನ್ಲೈನ್ ಪ್ರಮಾಣಿತ ಯೊರುಬಾ ಕೀಬೋರ್ಡ್ (QWERTY), ಫೋನೆಟಿಕ್ ಕೀಬೋರ್ಡ್ ಮತ್ತೊಂದು ಬಳಸಬಹುದು. ಶೀಘ್ರದಲ್ಲೇ ನಾವು ವರ್ಣಮಾಲೆಯ ರೂಪದಲ್ಲಿ ಯೊರುಬಾ ಕೀಬೋರ್ಡ್ ಸೇರಿಸುತ್ತದೆ. ಇದು Facebook ಮತ್ತು Twitter ನಲ್ಲಿ ಸ್ನೇಹಿತರೊಂದಿಗೆ ಬೆರೆಯಲು, ಅವುಗಳನ್ನು ಭಾಷಾಂತರಿಸಿ, ಮುದ್ರಣ ಮತ್ತು ಉಳಿಸಲು, ಟೇಪ್ ಅಕ್ಷರಗಳು ಬಹಳ ಸುಲಭ. ಮತ್ತು ಸಹಜವಾಗಿ - Google ಹುಡುಕಾಟ ಮತ್ತು YouTube ನಲ್ಲಿ ವೀಡಿಯೊ ಇಲ್ಲದೆ ಇಂಟರ್ನೆಟ್ ಏನು? ಈ ಎಲ್ಲಾ ಕಾರ್ಯಗಳನ್ನು ಒಂದು ಕ್ಲಿಕ್ ನಮ್ಮ ವೆಬ್ಸೈಟ್ನಲ್ಲಿ ಮಾಡಲಾಗುತ್ತದೆ - ಇದು ಪ್ರಯತ್ನಿಸಿ! ಸಹ, ನೀವು ನಂತರ ಅವುಗಳನ್ನು ಮುಂದುವರೆಸುವುದಾಗಿ, (ನೀವು ಫೇಸ್ಬುಕ್, ಟ್ವಿಟರ್ ಅಥವಾ ಗೂಗಲ್ ಬಳಸಿಕೊಂಡು ಲಾಗ್ ಅಗತ್ಯವಿದೆ) ನಿಮ್ಮ ಮುದ್ರಿತ ದಸ್ತಾವೇಜುಗಳ ಉಳಿಸಬಹುದು.
ಪಡೆಯಲು ಮತ್ತು ನಿಮ್ಮ ಸೈಟ್ನಲ್ಲಿ ವಾಸ್ತವ ಯೊರುಬಾ ಕೀಬೋರ್ಡ್ ಬಳಸಲು?
ಹೇಗೆ ನಿಮ್ಮ ವೆಬ್ಸೈಟ್ನಲ್ಲಿ ನಮ್ಮ ಲಿಂಕ್, ಬಟನ್, ಅಥವಾ ಸಂಪೂರ್ಣ ಆನ್ಲೈನ್ ವಾಸ್ತವ ಯೊರುಬಾ ಕೀಬೋರ್ಡ್ ಸ್ಥಾಪಿಸಬಹುದು - ಇದಕ್ಕೆ ನೀವು ನಿಮ್ಮ ವೆಬ್ಸೈಟ್ ಅಥವಾ ಬ್ಲಾಗ್ ಇಲ್ಲಿ ರಿಂದ ಕೋಡ್ ನಕಲಿಸಿ ಮತ್ತು ಅಂಟಿಸಿ ಅಗತ್ಯವಿದೆ. ಕೇವಲ ನಮಗೆ ಬರೆಯಲು ಮತ್ತು ಕಾಣೆಯಾಗಿದೆ ಏನು ವಿವರಿಸಲು - ನಾವು ನೀವು ವೈಶಿಷ್ಟ್ಯಗಳನ್ನು ಸಲಹೆಗಳನ್ನು ಮುಕ್ತವಾಗಿದೆ (ಹೆಚ್ಚಿನ ವಿವರ - ಉತ್ತಮ) - ಉಪಯೋಗಿಸಿ ನಾವು ಮಾಡುತ್ತಾರೆ!
ಆನ್ಲೈನ್ ಇಂಗ್ಲೀಷ್ ಕೀಬೋರ್ಡ್ ಗೆ ಯೊರುಬಾ ರಿಂದ ಅನುವಾದ
ಆನ್ಲೈನ್ ಯೊರುಬಾ ಕೀಬೋರ್ಡ್ ಚಿತ್ರೀಕರಿಸಲಾಯಿತು ಪಠ್ಯ ಭಾಷಾಂತರಿಸಲು, ಕೇವಲ ಕ್ಲಿಕ್ ಮಾಡಿ «ಭಾಷಾಂತರಿಸಿ» ಮತ್ತು ಹೊಸ ಕಿಟಕಿಯಲ್ಲಿ ಗೂಗಲ್ ಜಗತ್ತಿನಾದ್ಯಂತ ಅತ್ಯಂತ ಜನಪ್ರಿಯವಾಗಿದೆ ಆನ್ಲೈನ್ ಅನುವಾದಕ ತೆರೆಯುತ್ತದೆ. ಪೂರ್ವನಿಯೋಜಿತವಾಗಿ, ಯೊರುಬಾ ನಿಂದ ಇಂಗ್ಲೀಷ್ ಅನುವಾದ, ಆದರೆ ನೀವು ತನ್ನ ವಿವೇಚನೆಗೆ ಯಾವುದೇ ಆಯ್ಕೆ ಮಾಡಬಹುದು.
30ಕ್ಕೆ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಸ್ವಾಭಿಮಾನ ಸಮಾವೇಶ | Prajavani
30ಕ್ಕೆ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಸ್ವಾಭಿಮಾನ ಸಮಾವೇಶ
ಬೆಂಗಳೂರು: ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ಘಟಕವು ಇದೇ 30ರಂದು ಹುಬ್ಬಳ್ಳಿಯಲ್ಲಿ ವಿಭಾಗೀಯ ಮಟ್ಟದ ಸ್ವಾಭಿಮಾನ ಸಮಾವೇಶ ಆಯೋಜಿಸಿದೆ.
ಪಕ್ಷದ ಸೂಚನೆ ಪ್ರಕಾರ ನಾಲ್ಕು ವಿಭಾಗಗಳಲ್ಲಿ ಈ ರೀತಿಯ ಸಮಾವೇಶ ಹಮ್ಮಿಕೊಳ್ಳಲಾಗುವುದು. ಹುಬ್ಬಳ್ಳಿಯಲ್ಲಿ ಮೊದಲ ಸಮಾವೇಶ ನಡೆಸುತ್ತಿದ್ದು, ಬಿಜೆಪಿ ಸರ್ಕಾರದ ವೈಫಲ್ಯಗಳ ಬಗ್ಗೆ ಜನಜಾಗೃತಿ ಮೂಡಿಸಲಾಗುವುದು ಎಂದು ಘಟಕದ ಅಧ್ಯಕ್ಷ ಎನ್.ಮಂಜುನಾಥ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕೇಂದ್ರ ಸರ್ಕಾರದ ಪ್ರಗತಿಪರ ಕಾರ್ಯಕ್ರಮಗಳ ಬಗ್ಗೆಯೂ ಜನ ಜಾಗೃತಿ ಮೂಡಿಸಲಾಗುವುದು. ರಾಜ್ಯದ ಉಸ್ತುವಾರಿ ಹೊತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಅವರು ಸಮಾವೇಶಕ್ಕೆ ಚಾಲನೆ ನೀಡುವರು. ಕೆಪಿಸಿಸಿ ಅಧ್ಯಕ್ಷಡಾ.ಜಿ.ಪರಮೇಶ್ವರ್, ಕೇಂದ್ರ ಕಾರ್ಮಿಕ ಸಚಿವ ಎಂ.ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಅವರು ಭಾಗವಹಿಸಲಿದ್ದಾರೆ ಎಂದರು.
ವರದಿ ಮಂಡಿಸಲಿ: ಪರಿಶಿಷ್ಟರಿಗೆ ಒಳಮೀಸಲಾತಿ ಕಲ್ಪಿಸುವ ಸಂಬಂಧ ನ್ಯಾಯಮೂರ್ತಿ ಎ.ಜೆ.ಸದಾಶಿವ ಅವರು ಕೊಟ್ಟಿರುವ ವರದಿಯನ್ನು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಬೇಕು ಎಂದು ಅವರು ಆಗ್ರಹಿಸಿದರು.
ಆಯೋಗದ ವರದಿಯನ್ನು ಸರ್ಕಾರ ಬೀಗ ಹಾಕಿ ಎತ್ತಿಟ್ಟಿದೆ. ಅದರ ಪೂರ್ಣ ಮಾಹಿತಿಯನ್ನು ಬಹಿರಂಗಗೊಳಿಸಿಲ್ಲ. ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿಯೂ ಅದನ್ನು ಮಂಡಿಸಲಿಲ್ಲ. ಮುಂದಿನ ಬಾರಿಯಾದರೂ ಇದನ್ನು ಮಂಡಿಸಿ ಚರ್ಚೆಗೆ ಅವಕಾಶ ನೀಡಿದರೆ ಈ ಬಗ್ಗೆ ಕಾಂಗ್ರೆಸ್ ತನ್ನ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸಲಿದೆ ಎಂದು ಅವರು ತಿಳಿಸಿದರು.
ಬೆಂಗಳೂರು[ಅ.11]: ಅನಧಿಕೃತ ಕಟ್ಟಡಗಳ ನಿರ್ಮಾಣಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು 'ಕರ್ನಾಟಕ ಪೌರ ನಿಗಮ ಕಾಯ್ದೆ-1976ರ ಸೆಕ್ಷನ್‌ 321 ಬಿ ಪ್ರಕಾರ ದಂಡ ಪ್ರಮಾಣ ನಿಗದಿಪಡಿಸಿ ಕರಡು ನಿಯಮ ರೂಪಿಸಲಾಗಿದೆ ಎಂದು ಹೈಕೋರ್ಟ್‌ಗೆ ಸರ್ಕಾರ ಮಾಹಿತಿ ನೀಡಿತು.
ಪ್ರಕರಣ ಕುರಿತಂತೆ ವಕೀಲ ಎಸ್‌.ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ ಮತ್ತು ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರಿ ವಕೀಲ ಅಚ್ಚಪ್ಪ ಈ ಮಾಹಿತಿ ನೀಡಿದರು. ಜತೆಗೆ, 'ಕರ್ನಾಟಕ ಪೌರ ನಿಗಮಗಳು (ಅನಧಿಕೃತ ಕಟ್ಟಡಗಳ ನಿರ್ಮಾಣ ತಡೆಯಲು ವಿಫಲರಾದ ಅಧಿಕಾರಿಗಳಿಗೆ ದಂಡ ವಿಧಿಸುವ) ನಿಯಮಗಳು-2019'ರ ಕರಡು ಗೆಜೆಟ್‌ ಅಧಿಸೂಚನೆಯ ಪ್ರತಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.
ಹೈಕೋರ್ಟ್‌ ಆದೇಶದಂತೆ ಅ.3ರಂದು ಪರಿಷ್ಕೃತ ಕರಡು ನಿಯಮ ರೂಪಿಸಲಾಗಿದ್ದು, ಅ.4ರಂದು ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿದೆ. ಕರಡು ನಿಯಮಗಳು ಬಿಬಿಎಂಪಿ ಸೇರಿದಂತೆ ಪಾಲಿಕೆಗಳಿಗೆ ಅನ್ವಯವಾಗಲಿದೆ. ಸಾರ್ವಜನಿಕರಿಂದ ಆಕ್ಷೇಪಣೆ ಮತ್ತು ಸಲಹೆ ಆಹ್ವಾನಿಸಲಾಗಿದೆ. ಅದಕ್ಕಾಗಿ 30 ದಿನ ಕಾಲಾವಕಾಶ ನೀಡಲಾಗಿದ್ದು, ನಂತರ ನಿಯಮಗಳನ್ನು ಅಂತಿಮಗೊಳಿಸಲಾಗುವುದು ಎಂದು ಕರಡು ಅಧಿಸೂಚನೆಯಲ್ಲಿ ಹೇಳಲಾಗಿದೆ.
ಅದನ್ನು ದಾಖಲಿಸಿಕೊಂಡ ನ್ಯಾಯಪೀಠ, ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಿ ವಿಚಾರಣೆಯನ್ನು ನ.18ಕ್ಕೆ ಮುಂದೂಡಿತು.
ಕರಡು ನಿಯಮಗಳು
*ಕರ್ನಾಟಕ ಪೌರ ನಿಗಮ ಕಾಯ್ದೆ-1976ರ ಸೆಕ್ಷನ್‌ 321 ಬಿ ಪ್ರಕಾರ ಸಂಬಂಧಪಟ್ಟಅಧಿಕಾರಿ, ತನ್ನ ಅಧಿಕಾರಾವಧಿ ಮತ್ತು ಅಧಿಕಾರ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡ ನಿರ್ಮಾಣ ತಡೆಯಲು ವಿಫಲವಾದ ಬಗ್ಗೆ ದೂರು ಬಂದರೆ ಅಥವಾ ಆಯುಕ್ತರೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಶೋಕಾಸ್‌ ನೋಟಿಸ್‌ ಜಾರಿಗೊಳಿಸಬಹುದು. ನಂತರ ದಂಡ ವಿಧಿಸಲು ಕ್ರಮ ಕೈಗೊಳ್ಳಬೇಕು.
*ಮೊದಲ ಬಾರಿಗೆ ತಪ್ಪು ಎಸಗಿದರೆ 25 ಸಾವಿರ ರು.ಗೆ ಕಡಿಮೆ ಇಲ್ಲದಂತೆ ಮತ್ತು 50 ಸಾವಿರ ಮೀರದಂತೆ ದಂಡ ವಿಧಿಸಬಹುದು. ಎರಡನೇ ತಪ್ಪಿಗೆ .50 ಸಾವಿರಕ್ಕೆ ಕಡಿಮೆ ಇಲ್ಲದಂತೆ ಮತ್ತು 1 ಲಕ್ಷ ರು. ಮೀರದಂತೆ ದಂಡ ವಿಧಿಸಬಹುದು. ಮೂರನೇ ಮತ್ತು ಅದರ ನಂತರದ ಪ್ರತಿ ತಪ್ಪಿಗೆ ಆಯುಕ್ತರು ಪೌರ ನಿಗಮ ಕಾಯ್ದೆಯ ಸೆಕ್ಷನ್‌ 90ರಡಿ ಕ್ರಮ ಜರುಗಿಸಬಹುದು.
*ದಂಡ ಪಾವತಿಸಿದ ಅಧಿಕಾರಿಯು ನೀಡಿದ್ದ ಕಟ್ಟಡ ಯೋಜನಾ ಮಂಜೂರಾತಿಗೆ ಅನುಮೋದನೆ ನೀಡುವಂತಿಲ್ಲ.
*ಸಂತ್ರಸ್ತ ಅಥವಾ ಬಾಧಿತ ಅಧಿಕಾರಿಯು ಸಂಬಂಧಪಟ್ಟಪ್ರಾದೇಶಿಕ ಆಯುಕ್ತರಿಗೆ 30 ದಿನಗಳಲ್ಲಿ ಮನವಿ ಸಲ್ಲಿಸಬೇಕು. ಆ ಅಧಿಕಾರಿಗೆ ಶೋಕಾಸ್‌ ನೋಟಿಸ್‌ ನೀಡಿ ಅವರ ವಾದ ಕೇಳಿದ ನಂತರ 45 ದಿನಗಳಲ್ಲಿ ಮನವಿಯನ್ನು ಇತ್ಯರ್ಥಪಡಿಸಬೇಕು. ಪ್ರಾದೇಶಿಕ ಆಯುಕ್ತರ ತೀರ್ಮಾನವೇ ಅಂತಿಮ.
ಜಮ್ಮು ಮತ್ತು ಕಾಶ್ಮೀರದಿಂದ ಏಳು ಸಾವಿರ ಪೊಲೀಸ್ ಹಿಂಪಡೆದಿರುವುದರ ಮರ್ಮವೇನು? - Pratidhvani
ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯ ಅನ್ವಯ ಕಲ್ಪಿಸಲಾಗಿದ್ದ ವಿಶೇಷ ಸ್ಥಾನಮಾನವನ್ನು ಆಗಸ್ಟ್ ನಲ್ಲಿ ರದ್ದುಗೊಳಿಸುವ ಮೂಲಕ ತನ್ನ ಪ್ರಣಾಳಿಕೆಯ ವಿವಾದಾತ್ಮಕ ತೀರ್ಮಾನಕ್ಕೆ ತಾನು ಬದ್ಧ ಎಂದು ಸಾರಿದ್ದ ಬಿಜೆಪಿಯು ಮಹತ್ವದ ಬೆಳವಣಿಗೆಯಲ್ಲಿ ಕಾಶ್ಮೀರದ ಭದ್ರತೆಗೆ ನಿಯೋಜಿಸಿದ್ದ ವಿವಿಧ ಪಡೆಗಳ ಸುಮಾರು 7,000 ಪೊಲೀಸರನ್ನು ಮೂಲ ಸ್ಥಾನಕ್ಕೆ ಕಳುಹಿಸಿದೆ. ಏಕಪಕ್ಷೀಯ ನಿರ್ಧಾರದ ಮೂಲಕ ಕಾಶ್ಮೀರಿಗರ ಹಕ್ಕುಗಳನ್ನು ದಮನ‌ ಮಾಡಲಾಗುತ್ತಿದೆ ಎಂದು ಹಲವು ರಾಷ್ಟ್ರಗಳ ನಾಯಕರು, ಜಾಗತಿಕ ಮಾಧ್ಯಮಗಳು, ತಜ್ಞರಿಂದ ಕಟುಟೀಕೆಗೆ ಒಳಗಾಗಿದ್ದ ನರೇಂದ್ರ ಮೋದಿ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ಜನಜೀವನವನ್ನು ಸಹಜ ಸ್ಥಿತಿಗೆ ಮರಳಿ ತರಲಾಗುತ್ತಿದೆ ಎಂಬ‌ ಸಂದೇಶವನ್ನು ವಿಶ್ವ ಸಮುದಾಯಕ್ಕೆ ರವಾನಿಸುವ ಯತ್ನ ಆರಂಭಿಸಿದೆ.
ಕಳೆದ 140 ದಿನಗಳಿಂದ ಅಕ್ಷರಶಃ ಸ್ತಬ್ಧವಾಗಿರುವ ಕಾಶ್ಮೀರದಲ್ಲಿ ಮೊದಲ ಬಾರಿಗೆ ಕಳೆದ ಶುಕ್ರವಾರ 14ನೇ‌ ಶತಮಾನದ ಸುಪ್ರಸಿದ್ಧ ಜಾಮೀಯಾ ಮಸೀದಿಯಲ್ಲಿ ನಮಾಜ್ ಸಲ್ಲಿಸಲು ಅವಕಾಶ ಮಾಡಿಕೊಡುವ ಮೂಲಕ ಕೇಂದ್ರ ಸರ್ಕಾರವು ಕಾಶ್ಮೀರದ ಕಥನದ ಉತ್ತರಾರ್ಧ ಆರಂಭಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆ ಮಾಡಿ ಅದಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಮೋದಿ ಸರ್ಕಾರವು ಕಳೆದ ನಾಲ್ಕು ತಿಂಗಳಿಂದ ಕಾಶ್ಮೀರವನ್ನು ಅಕ್ಷರಶಃ ಭದ್ರತಾ ಪಡೆಗಳ ವಶದಲ್ಲಿಟ್ಟಿದೆ. ಭಾರತದ ಏಕೈಕ ಮುಸ್ಲಿಮ್ ಪ್ರಾಬಲ್ಯ ರಾಜ್ಯವಾದ ಜಮ್ಮು ಮತ್ತು ಕಾಶ್ಮೀರ ಹಾಗೂ ಲದಾಕ್ ಪ್ರಾಂತ್ಯಗಳನ್ನು ವಿಂಗಡಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ರಾಜಕೀಯ ಮುಖಂಡರನ್ನು ಗೃಹ ಬಂಧನದಲ್ಲಿರಿಸಿರುವುದು, ಹೋರಾಟಗಾರರು, ಹುರಿಯತ್ ನಾಯಕರು, ವಿದ್ಯಾರ್ಥಿಗಳನ್ನು ಬಿಜೆಪಿಯ ಸರ್ಕಾರವು ಜೈಲಿಗಟ್ಟಿದ್ದು, ಸ್ವತಂತ್ರ ಮಾಧ್ಯಮಗಳು ವರದಿ ಮಾಡುವುದನ್ನು ಸಂಪೂರ್ಣವಾಗಿ‌ ನಿಷೇಧಿಸಿದೆ. ಇಂಟರ್ನೆಟ್ ನಿರ್ಬಂಧ ವಿಧಿಸಿರುವುದರಿಂದ ಅಲ್ಲಿನ ಮಾಧ್ಯಮಗಳು ಪರಿಣಾಮಕಾರಿಯಾಗಿ ಕೆಲಸ ಮಾಡಲಾಗದ ಸ್ಥಿತಿ ತಲುಪಿವೆ.‌ ಜನಜೀವನ, ಶಾಲಾ-ಕಾಲೇಜು, ಉದ್ಯಮ ಸಂಪೂರ್ಣವಾಗಿ ಬಂದ್ ಆಗಿವೆ. ಸರ್ಕಾರದ ನಿರ್ಧಾರದಿಂದಾಗಿ ಸುಮಾರು 15 ಸಾವಿರ ಕೋಟಿಗೂ ಅಧಿಕ ನಷ್ಟ ಜಮ್ಮು ಮತ್ತು ಕಾಶ್ಮೀರದಲ್ಲಾಗಿದೆ ಎನ್ನಲಾಗಿದೆ.
ದೇಶದ ವಿವಿಧ ರಾಜಕೀಯ ಪಕ್ಷಗಳ ನಾಯಕರು ಕಾಶ್ಮೀರಕ್ಕೆ ತೆರಳುವುದಕ್ಕೆ ನಿರ್ಬಂಧ ವಿಧಿಸಿರುವ ಸರ್ಕಾರದ ನಿರ್ಧಾರವನ್ನು ಹಲವರು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿದ್ದಾರೆ. ಕಟು ನಿರ್ಧಾರಗಳಿಂದ ಕಾಶ್ಮೀರವನ್ನು ಉಳಿದ ಜಗತ್ತಿನಿಂದ ತುಂಡರಿಸಿದ ಮೋದಿ ಸರ್ಕಾರದ ಬಗ್ಗೆ ಜಾಗತಿಕ ಸಮುದಾಯ ಹಾಗೂ ಮಾಧ್ಯಮಗಳು ಮಾನವ ಹಕ್ಕುಗಳ ಉಲ್ಲಂಘನೆಯನ್ನು ಪ್ರಮುಖವಾಗಿಟ್ಟುಕೊಂಡು ಮೋದಿಯವರನ್ನು ಸರ್ವಾಧಿಕಾರಿ ಎಂದು ಕರೆದಿವೆ. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಮೋದಿ ಸರ್ಕಾರವು ಟೀಕಾಕಾರರು ಹೇಳುವಂತೆ ಕಾಶ್ಮೀರದಲ್ಲಿ ಪರಿಸ್ಥಿತಿ ಕೆಟ್ಟಿಲ್ಲ ಎಂದು ವಾದಿಸಿತ್ತು. ಅದಕ್ಕಾಗಿ ಬಲಪಂತೀಯ ಜನಪ್ರತಿನಿಧಿಗಳನ್ನೊಳಗೊಂಡ ಐರೋಪ್ಯ ಒಕ್ಕೂಟದ ನಿಯೋಗವನ್ನು ಕಾಶ್ಮೀರಕ್ಕೆ ಕಳುಹಿಸಿ ಪರಿಸ್ಥಿತಿ ಚೆನ್ನಾಗಿದೆ ಎಂದು ಹೇಳಿಸುವ ತಂತ್ರ ಭಗ್ನಗೊಂಡು ಭಾರಿ ಮುಖಭಂಗ ಅನುಭವಿಸಿದೆ.
Delighted to witness d first ever football match in last several months in Kashmir between Real Kashmir and Chennai clubs at Srinagar. Congratulations to Real Kashmir FC for winning d match. They are playing so well n r favourites for championship this season. Goodluck
— Ram Madhav (@rammadhavbjp) December 26, 2019
ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿಗೆ ಸಹಜವಾಗಿ ವಿರೋಧ ವ್ಯಕ್ತಪಡಿಸಿದ್ದು ನೆರೆಯ ಪಾಕಿಸ್ತಾನ.‌ ತನ್ನ ಕುತಂತ್ರಗಳ ಮೂಲಕ ಭಾರತದ ವಿರುದ್ಧ ಯುದ್ಧ ಸಾರುತ್ತಿರುವ ಪಾಕಿಸ್ತಾನವು ಕಾಶ್ಮೀರ ವಿವಾದವನ್ನು ಜಾಗತಿಕ ವಿಷಯವಾಗಿಸಲು ಚೀನಾದ ಜೊತೆಗೂಡಿ ಯತ್ನಿಸಿ ವಿಫಲವಾಗಿದೆ.‌ ಇದರ ಮಧ್ಯೆ, ಟರ್ಕಿ, ಸೌದಿ ಅರೇಬಿಯಾ, ಮಲೇಷಿಯಾ ಹಾಗೂ ಅಮೆರಿಕಾದ ಡೆಮಾಕ್ರಟಿಕ್ ಪಕ್ಷದ ಸದಸ್ಯರು, ಬ್ರಿಟಿನ್ನಿನ ಲೇಬರ್ ಪಕ್ಷದ ‌ಸದಸ್ಯರು ಹಾಗೂ ಜರ್ಮನಿಯ ಚಾನ್ಸೆಲರ್ ಎಂಜೆಲಾ ಮಾರ್ಕೆಲ್ ಕಾಶ್ಮೀರದ ಸ್ಥಿತಿಗತಿಯ ಬಗ್ಗೆ ಮೋದಿ ಸರ್ಕಾರಕ್ಕೆ ಅಪಥ್ಯವಾದ ಮಾತುಗಳನ್ನಾಡಿದ್ದಾರೆ.‌ ಇದಕ್ಕಾಗಿಯೇ ಮೋದಿ ಟರ್ಕಿ ಪ್ರವಾಸ ರದ್ದುಗೊಳಿಸಿದ್ದರು. ಅಮೆರಿಕಾದ ಡೆಮಾಕ್ರಟಿಕ್ ಪಕ್ಷದ ಭಾರತೀಯ ಸಂಜಾತೆ ಪ್ರಮೀಳಾ ಜೈಪಾಲ್ ಅವರನ್ನು ಭೇಟಿ ಮಾಡಲು ಇತ್ತೀಚೆಗೆ ಅಮೆರಿಕದ ಪ್ರವಾಸದಲ್ಲಿದ್ದ ಭಾರತದ ವಿದೇಶಾಂಗ ಸಚಿವ ಜೈಶಂಕರ್ ನಿರಾಕರಿಸಿದ್ದರು ಎಂಬುದು ಗಮನಾರ್ಹ.
ಈ ಎಲ್ಲಾ ಟೀಕೆಗಳ ಉತ್ತರವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಮರಳುತ್ತಿದೆ ಎಂಬ ಸಂದೇಶ ರವಾನಿಸುವ ಭಾಗವಾಗಿ 7,000 ಪೊಲೀಸರನ್ನು ಮರಳಿ ಕರೆಸಿಕೊಳ್ಳಲಾಗಿದೆ ಎನ್ನಲಾಗುತ್ತಿದೆ. ಇನ್ನೊಂದು ವಾದದ ಪ್ರಕಾರ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಹೋರಾಟವು ದಿನದಿಂದ‌ ದಿನಕ್ಕೆ ವ್ಯಾಪಕವಾಗುತ್ತಿರುವುದರಿಂದ ಭದ್ರತಾ ಪಡೆಗಳ ಅಗತ್ಯ ಪರಿಗಣಿಸಿ, ಕೇಂದ್ರ ಗೃಹ ಸಚಿವಾಲಯ ನಿರ್ಧಾರ ಕೈಗೊಂಡಿದೆ ಎಂಬ ಚರ್ಚೆಯೂ ಇದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಕಲ್ಪಿಸಲಾಗಿದ್ದ ವಿಶೇಷ ಮಾನ್ಯತೆಯ ರದ್ದತಿಯ ಹಿಂದೆ ರಾಜಕೀಯ ಲಾಭದ ಲೆಕ್ಕಾಚಾರವಿಲ್ಲದಿಲ್ಲ. ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವಾಗಿಸುವುದು, ಅಲ್ಲಿನ ಪ್ರತ್ಯೇಕತೆಯ ಕೂಗನ್ನು ತಣಿಸುವುದು ಮಿಗಿಲಾಗಿ ಅಲ್ಲಿನ ಜನರನ್ನು ಅಭಿವೃದ್ಧಿಯ ಭಾಗವಾಗಿಸುವುದು ತನ್ನ ನಿರ್ಧಾರದ ಹಿಂದಿನ ಉದ್ದೇಶ ಎಂದು ಮೋದಿ ಸರ್ಕಾರ ಹೇಳಿದರೂ‌ ಅದಕ್ಕೂ ಮಿಗಿಲಾದ ರಾಜಕೀಯ ಉದ್ದೇಶ ತನಗಿದೆ ಎಂಬುದನ್ನು ಬಿಜೆಪಿ ಹೇಳಲಾರಂಭಿಸಿದೆ.‌‌ ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ನೇತೃತ್ವದ ಸರ್ಕಾರ ಮಾಡಿದ್ದ ಐತಿಹಾಸಿಕ ಪ್ರಮಾದವನ್ನು ಸರಿಪಡಿಸುವ ನಿಟ್ಟಿನಿಂದ ಹಾಗೂ ಭಾರತವನ್ನು ಒಂದುಗೂಡಿಸುವ ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಆಶಯದಂತೆ ಕಾಶ್ಮೀರ ವಿವಾದವನ್ನು ಬಗೆಹರಿಸಲಾಗಿದೆ ಎನ್ನುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಶಾಶ್ವತವಾಗಿ ಆರೋಪಿ ಸ್ಥಾನದಲ್ಲಿ ನಿಲ್ಲಿಸುವ ಕೆಲಸವನ್ನು ಮೋದಿ ಸರ್ಕಾರ ಮಾಡಿದೆ.‌
ಈ ಘನ ನಿರ್ಧಾರವನ್ನು ಮುಂದಿರಿಸಿಕೊಂಡು ರಾಷ್ಟ್ರೀಯತೆಯ ವಿಚಾರವನ್ನು ಪ್ರಮುಖ ಚುನಾವಣಾ ವಿಷಯವಾಗಿ ಉಳಿಸುವ ಬಿಜೆಪಿಯ ಪ್ರಯತ್ನಕ್ಕೆ ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ಮತದಾರರು‌ ಸೊಪ್ಪುಹಾಕಿಲ್ಲ. ಆದರೆ,‌ ಮುಂದಿನ ದಿನಗಳಲ್ಲಿ ತನ್ನ ಪ್ರಣಾಳಿಕೆಯ ಭರವಸೆಯ ಈಡೇರಿಕೆ ವಿಷಯವನ್ನು ಜನರಿಗೆ ಒಪ್ಪಿಸಿ, ಮತಗಳಿಸಲು ಯಾವ ಆಯಾಮವನ್ನು ಬಿಜೆಪಿ ಕಂಡುಕೊಳ್ಳಲಿದೆ ಎಂಬುದು ಸಹಜವಾಗಿ ಕುತೂಹಲ ಮೂಡಿಸಿದೆ.
ಸ್ಕೂಟರ್ ಪ್ರಿಯರನ್ನು ಸೆಳೆದ ಎಪ್ರಿಲಿಯಾ ಎಸ್ಆರ್ 150 "ವಾಟ್ ದ ಫನ್" ಜಾಹೀರಾತು - Kannada DriveSpark
ಹೊಸ ಬಣ್ಣದ ಆಯ್ಕೆಯಲ್ಲಿ ಎಪ್ರಿಲಿಯಾ ಎಸ್ಆರ್ 150 ಬಲಿಷ್ಠ ಸ್ಕೂಟರ್ ಬಿಡುಗಡೆಯಾಗುತ್ತಾ ?
ಡಿಸೆಂಬರ್ ಅಂತ್ಯಕ್ಕೆ ಬಿಡುಗಡೆಯಾಗಲಿವೆ ಎಪ್ರಿಲಿಯಾ ಎಸ್‌ಆರ್ 150 ಹೊಸ ಆವೃತ್ತಿ
ಬಿಡುಗಡೆಗೊಂಡ ಎಪ್ರಿಲಿಯಾ ಡೊರ್ಸೊಡ್ಯುರೊ 900 ಮತ್ತು ಶಿವರ್ 900..!!
ಅಗಸ್ಟ್ ಅಂತ್ಯಕ್ಕೆ ಬಿಡುಗಡೆಯಾಗಲಿವೆ ಎಪ್ರಿಲಿಯಾ ವಿನೂತನ ಬೈಕ್‌ಗಳು
ಸ್ಕೂಟರ್ ಪ್ರಿಯರನ್ನು ಸೆಳೆದ ಎಪ್ರಿಲಿಯಾ ಎಸ್ಆರ್ 150 "ವಾಟ್ ದ ಫನ್" ಜಾಹೀರಾತು
Published: Saturday, September 23, 2017, 13:59 [IST]
ಸದ್ಯ ಸ್ಕೂಟರ್ ವಿಭಾಗದಲ್ಲೇ ವಿಶೇಷ ಸೌಲಭ್ಯಗಳನ್ನು ಹೊಂದುವ ಮೂಲಕ ಭರ್ಜರಿ ಮಾರಾಟಗೊಳ್ಳುತ್ತಿರುವ ಎಪ್ರಿಲಿಯಾ ಎಸ್ಆರ್ 150 ಸ್ಕೂಟರ್‌ಗಳಿಗೆ ಸಂಬಂಧಿಸಿದ ಹೊಸದೊಂದು ಜಾಹೀರಾತು ಬಿಡುಗಡೆಗೊಂಡಿದ್ದು, ಆಟೋ ಉದ್ಯಮದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಎಸ್ಆರ್ 150 ಸ್ಕೂಟರ್ ಮೂಲಕ ಸಾಕಷ್ಟು ಜನಪ್ರಿಯತೆ ಪಡೆಯುತ್ತಿರುವ ಎಪ್ರಿಲಿಯಾ ಸಂಸ್ಥೆಯು ಮುಂಬರುವ ಡಿಸೆಂಬರ್‌‌ನಲ್ಲಿ ಎಸ್ಆರ್ 150 ಹೊಸ ಸ್ಕೂಟರ್ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದು, ಈ ಹಿನ್ನೆಲೆ 'ವಾಟ್ ದ ಫನ್' ಎನ್ನುವ ಜಾಹೀರಾತು ಬಿಡುಗಡೆಗೊಳಿಸಿದೆ.
ಗ್ಲ್ಯಾಮರಸ್ ಲುಕ್‌ನೊಂದಿಗೆ ಈಗಾಗಲೇ ಮಾರುಕಟ್ಟೆಯಲ್ಲಿ ಹೊಸ ದಾಖಲೆ ಸೃಷ್ಠಿಸುತ್ತಿರುವ ಎಪ್ರಿಲಿಯಾ ಎಸ್ಆರ್ 150 ಸ್ಕೂಟರ್‌ಗಳು ಪ್ರಸ್ತುತ ಗ್ರಾಹಕರ ಬೇಡಿಕೆಗೆ ತಕ್ಕಂತೆ ಬದಲಾದಣೆ ಹೊಂದುತ್ತಿದ್ದು, ಡಿಸೆಂಬರ್ ಅಂತ್ಯಕ್ಕೆ ಖರೀದಿಗೆ ಲಭ್ಯವಿರಲಿವೆ.
ಹೊಸ ಮಾದರಿಯ ಬೆಲೆಯನ್ನು ದೆಹಲಿ ಎಕ್ಸ್‌ಶೋರಂ ಪ್ರಕಾರ ರೂ.65 ಸಾವಿರಕ್ಕೆ ನಿಗದಿ ಮಾಡಲಾಗಿದ್ದು, ಈ ಹಿಂದಿನ ಮಾದರಿಯಲ್ಲಿದ್ದ ಸ್ಟಿಫ್ ಸಸ್ಪೆಷನ್ ಸೆಟ್ ಅಪ್ ವ್ಯವಸ್ಥೆಯಲ್ಲಿನ ದೋಷವನ್ನು ಹೊಸ ಆವೃತ್ತಿಯಲ್ಲಿ ನಿವಾರಣೆ ಮಾಡಲಾಗಿದೆ.
ಹೊಸ ಆವೃತ್ತಿಯಲ್ಲಿ ಮೇಲ್ನೋಟದ ವಿನ್ಯಾಸಗಳಲ್ಲಿ ಮಾತ್ರ ಬದಲಾವಣೆ ತರಲಾಗಿದ್ದು, ಈ ಹಿಂದಿನ 154.8 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಒದಗಿಸಲಾಗಿದೆ. ಇದು 10. 4-ಬಿಎಚ್‌ಪಿ ಮತ್ತು 11.4-ಎನ್ಎಂ ಟಾರ್ಕ್ ಉತ್ಪಾದನಾ ಶಕ್ತಿಯನ್ನು ಹೊಂದಿದ್ದು, ಮುಂಭಾಗದ ಚಕ್ರದಲ್ಲಿ 220ಎಂಎಂ ಡಿಸ್ಕ್ ಬ್ರೇಕ್ ಹಾಗೂ ಹಿಂಭಾಗದಲ್ಲಿ ಚಕ್ರದಲ್ಲಿ 140ಎಂಎಂ ಡ್ರಮ್ ಬ್ರೇಕ್ ಜೋಡಣೆ ಮಾಡಲಾಗಿದೆ.
ಇದಲ್ಲದೇ ರೇಸ್ ಮಾದರಿಯಲ್ಲಿ ಕೆಲವು ಹೊಸ ವೈಶಿಷ್ಟ್ಯತೆಗಳನ್ನು ಒದಗಿಸಲಾಗಿದ್ದು, ಟ್ಯೂಬ್‌ಲೆಸ್ ಟಯರ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಿರುವುದು ಸ್ಕೂಟರ್ ರೇಸ್ ಪ್ರಿಯರಿಗೆ ಅನುಕೂಲಕರವಾಗಲಿವೆ.
18 ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿ : ಡಾ.ಬಿ.ಸಿ.ಸತೀಶ – ಮೈಸೂರು ಟುಡೆ
Home/ ಪ್ರಮುಖ ಸುದ್ದಿ/ ಕರ್ನಾಟಕ/18 ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿ : ಡಾ.ಬಿ.ಸಿ.ಸತೀಶ
CTBUREAU_SH December 2, 2021
ರಾಜ್ಯ(ಮಡಿಕೇರಿ) ಡಿ.2:-ಎಚ್‍ಐವಿ/ ಏಡ್ಸ್ ಬಗ್ಗೆ ಪ್ರತಿ ವಯಸ್ಕರಲ್ಲಿಯೂ ಜಾಗೃತಿ ಇರಬೇಕು ಎಂದು ಜಿಲ್ಲಾದಿಕಾರಿ ಡಾ.ಬಿ.ಸಿ ಸತೀಶ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಕೊಡಗು, ಮಡಿಕೇರಿ ಲಯನ್ಸ್ ಸಂಸ್ಥೆ, ರೋಟರಿ ಸಂಸ್ಥೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಎಫ್‍ಎಂಕೆಎಂಸಿ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು, ಓಡಿಪಿ-ಸ್ನೇಹಾಶ್ರಯ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ 'ಅಸಮಾನತೆ ಕೊನೆಗೊಳಿಸಿ, ಏಡ್ಸ್ ಕೊನೆಗೊಳಿಸಿ ಹಾಗೂ ಸಾಂಕ್ರಾಮಿಕ ರೋಗ ಕೊನೆಗೊಳಿಸಿ ಎಂಬ ಘೋಷಣೆಯೊಂದಿಗೆ ನಡೆದ ವಿಶ್ವ ಏಡ್ಸ್ ದಿನ-2021 ರ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಎಚ್‍ಐವಿ/ ಏಡ್ಸ್ ಹರಡುವ ವಿಧಾನಗಳು, ಗುಣ ಲಕ್ಷಣಗಳು, ಅದರ ಪ್ರಭಾವ ಮತ್ತಿತರ ಬಗ್ಗೆ ಜ್ಞಾನ ಇರಬೇಕು. ಸೋಂಕಿತ ವ್ಯಕ್ತಿ ಬಗೆಗಿನ ದೃಷ್ಟಿಕೋನ ಬದಲಾಗಬೇಕು. ವಿದ್ಯಾರ್ಥಿಗಳು ಸಾಂಕ್ರಾಮಿಕ ರೋಗಗಳ ಬಗ್ಗೆ ಮಾಹಿತಿ ಪಡೆಯುವುದರ ಮೂಲಕ ಸುತ್ತಮುತ್ತಲಿನ ವಾತಾವರಣದಲ್ಲಿನ ಬದಲಾವಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದರು.
ಸೋಂಕಿತ ವ್ಯಕ್ತಿಯನ್ನು ಯಾವುದೇ ರೀತಿಯ ತಾರತಮ್ಯದಿಂದ ನೋಡದೆ ಸಮಾನತೆಯಿಂದ ಕಾಣಬೇಕು. ಎಚ್‍ಐವಿ/ ಏಡ್ಸ್ ಬಾಧಿತರನ್ನು ಇತರರಂತೆ ಕಾಣಬೇಕು. ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದರು.
'ಜನವರಿ 01, 2022 ರ ವೇಳೆಗೆ 18 ವರ್ಷ ತುಂಬುವ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್-19 ಲಸಿಕೆ ಪಡೆಯಬೇಕು ಜೊತೆಗೆ ಮತದಾನದ ಗುರುತಿನ ಚೀಟಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸಲಹೆ ಮಾಡಿದರು.'
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಸುಬ್ರಮಣ್ಯ ಅವರು ಮಾತನಾಡಿ ಪ್ರತಿಯೊಬ್ಬರಿಗೂ ಬದುಕುವ ಹಕ್ಕು ಇದೆ. ಎಚ್‍ಐವಿ/ಏಡ್ಸ್ ಪೀಡಿತರಿಗೂ ಸೌಲಭ್ಯಗಳನ್ನು ತಲುಪಿಸಬೇಕು ಎಂದರು.
'ಎಚ್‍ಐವಿ ಏಡ್ಸ್ ಮಾರಕ ರೋಗದಿಂದ ದೂರವಿರಲು ಮುನ್ನೆಚ್ಚರಿಕೆ ವಹಿಸಬೇಕು. ರಾಗಿಗೆ ಒಂದೇ ತೆನೆ, ಬಾಳೆಗೆ ಒಂದೇ ಗೊನೆ ಎಂಬ ಪರಿಕಲ್ಪನೆಯಲ್ಲಿ ಬದುಕಬೇಕು ಎಂದರು.'
ಕೋವಿಡ್‍ನಂತಹ ಸಾಂಕ್ರಾಮಿಕ ರೋಗಗಳನ್ನು ತಡೆಯಲು ಮುನ್ನೆಚ್ಚರಿಕೆ ವಹಿಸಬೇಕು. ಕಾಲ ಕಾಲಕ್ಕೆ ಸರ್ಕಾರ ಹೊರಡಿಸುವ ಮಾರ್ಗಸೂಚಿ ಪಾಲಿಸಬೇಕು. ನಾವು ಸುರಕ್ಷಿತವಾಗಿರಬೇಕು. ಇತರರನ್ನು ಸುರಕ್ಷಿತರನ್ನಾಗಿ ಬದುಕಲು ಮುನ್ನೆಚ್ಚರ ವಹಿಸುವುದು ಅತ್ಯಗತ್ಯ ಎಂದು ಎನ್.ಸುಬ್ರಮಣ್ಯ ಅವರು ಪ್ರತಿಪಾದಿಸಿದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕರಾದ ಕೆ.ಸಿ.ದಯಾನಂದ ಅವರು ಮಾತನಾಡಿ ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಹೊಂದಿರಬೇಕು. ಇಲ್ಲದಿದ್ದಲ್ಲಿ ಕುಟುಂಬ ಹಾಗೂ ಸಮಾಜದ ಆರ್ಥಿಕ ವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಅವರು ಹೇಳಿದರು.
ಎಚ್‍ಐವಿ ಏಡ್ಸ್ ರೋಗವು ಮಾನವನ ರೋಗ ನಿರೋಧಕ ಶಕ್ತಿಯನ್ನು ಕುಂದಿಸುತ್ತದೆ. ಆದ್ದರಿಂದ ಈ ಬಗ್ಗೆ ಎಚ್ಚರವಹಿಸಬೇಕು. ಅಸುರಕ್ಷಿತ ಲೈಂಗಿಕ ಸಂಪರ್ಕ, ಪರೀಕ್ಷೆ ಮಾಡದ/ ಸೋಂಕಿತರ ರಕ್ತ ಮತ್ತು ರಕ್ತ ಉತ್ಪನ್ನಗಳ ವರ್ಗಾವಣೆ, ಸಂಸ್ಕರಿಸದ ಸೂಜಿ, ಸಿರಿಂಜ್, ಸಾಧನಗಳನ್ನು ಬಳಸುವುದರಿಂದ ಎಚ್‍ಐವಿ ಹರಡುವ ಸಾಧ್ಯತೆ ಹೆಚ್ಚಿದೆ ಎಂದು ಅವರು ಹೇಳಿದರು.
ಎಚ್‍ಐವಿ ಏಡ್ಸ್‍ನಿಂದ ತೂಕ ಕಡಿಮೆಯಾಗುವುದು, ಒಂದು ತಿಂಗಳವರೆಗೆ ಭೇದಿ ಆಗುವುದು, ಸತತ ಜ್ವರ ಬರುವುದು, ಕ್ಷಯ ಸೋಂಕು ತಗಲುವುದು, ಬಾಯಿ, ಗಂಟಲು ಮತ್ತು ಅನ್ನನಾಳಗಳಲ್ಲಿ ಬಿಳಿ ಪೊರೆ ಉಂಟಾಗುವುದು, ನ್ಯುಮೊನಿಯಾ ಸೋಂಕು ತಗುಲುವುದು, ದೃಷ್ಟಿ ಕಡಿಮೆಯಾಗುವುದು ಇದರ ಲಕ್ಷಣವಾಗಿದೆ ಎಂದು ದಯಾನಂದ ಅವರು ಮಾಹಿತಿ ನೀಡಿದರು.
ರೋಟರಿ ಸಂಸ್ಥೆಯ ಅಧ್ಯಕ್ಷರಾದ ಎನ್.ಡಿ.ಅಚ್ಚಯ್ಯ ಅವರು ಮಾತನಾಡಿ ಎಚ್‍ಐವಿ ಏಡ್ಸ್ ಬರದಂತೆ ಮುನ್ನೆಚ್ಚರ ವಹಿಸುವುದು ಅತ್ಯಗತ್ಯ. ಹಾಗೆಯೇ ಪೌಷ್ಠಿಕ ಆಹಾರ ಪಡೆಯಬೇಕು. ಎಚ್‍ಐವಿ ಏಡ್ಸ್ ಬಾಧಿತರನ್ನು ಯಾವುದೇ ಕಾರಣಕ್ಕೂ ದೂರವಿಡಬಾರದು. ಇತರರಂತೆ ಕಾಣಬೇಕು ಎಂದರು.
ಲಯನ್ಸ್ ಸಂಸ್ಥೆಯ ಅಧ್ಯಕ್ಷರಾದ ನಟರಾಜು ಕೆಸ್ತೂರು ಅವರು ಮಾತನಾಡಿ ಎಚ್‍ಐವಿ/ಏಡ್ಸ್ ಗಿಂತ ಕೊರೊನಾ ವೈರಸ್ ಅಪಾಯಕಾರಿ, ಆದರೆ ಎಚ್‍ಐವಿ/ಏಡ್ಸ್ ಸೇರಿದಂತೆ ಪ್ರತಿಯೊಂದು ಸಾಂಕ್ರಾಮಿಕ ರೋಗಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. 2030 ಕ್ಕೆ ಎಚ್‍ಐವಿ ಏಡ್ಸ್‍ನ್ನು ನಿರ್ಮೂಲನೆ ಮಾಡಲು ಪ್ರತಿಯೊಬ್ಬರೂ ಕೈಜೋಡಿಸಬೇಕಿದೆ ಎಂದು ಅವರು ಹೇಳಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಆನಂದ್ ಅವರು ಜಿಲ್ಲೆಯಲ್ಲಿ 44 ಐಸಿಟಿಸಿ ಕೇಂದ್ರ (ಪ್ರತ್ಯೇಕ-07, ಪ್ರಾ.ಆ.ಕೇಂದ್ರ-34 ಹಾಗೂ ಖಾಸಗಿ ಆಸ್ಪತ್ರೆ-03), 01 ಎಆರ್‍ಟಿ ಕೇಂದ್ರ(ಚಿಕಿತ್ಸಾ ಕೇಂದ್ರ, ಜಿಲ್ಲಾ ಆಸ್ಪತ್ರೆ), 04 ಲಿಂಕ್ ಎಆರ್‍ಟಿ ಕೇಂದ್ರ, 07 ಇಐಡಿ (ಡಿಎನ್‍ಎ/ಪಿಸಿಆರ್), 03 ಸ್ವಯಂ ಸೇವಾ ಸಂಸ್ಥೆಗಳು ಒಳಗೊಂಡಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ, ರೆಡ್‍ಕ್ರಾಸ್ ಸಂಸ್ಥೆಯ ಡಾ.ಮುರಳೀಧರ, ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಗೋಪಿನಾಥ್, ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಪಿ.ಆರ್.ವಿಜಯ, ಓಡಿಪಿ-ಸ್ನೇಹಾಶ್ರಯ ಸಮಿತಿ ಕಾರ್ಯಾಧ್ಯಕ್ಷರಾದ ಕೆ.ಟಿ.ಬೇಬಿಮ್ಯಾಥ್ಯೂ, ಜಾಯ್ಸ್ ಮೆನೆಜಸ್, ಲಯನ್ ಕಾರ್ಯದರ್ಶಿ ಸೋಮಣ್ಣ, ಕೆ.ಕೆ.ದಾಮೋದರ ಇತರರು ಇದ್ದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಲ್ಲಿ ಎಚ್‍ಐವಿ/ ಏಡ್ಸ್ ಜಾಗೃತಿ ಜಾಥಾಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಲ್.ಜಿನರಾಳಕರ್ ಅವರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಎಚ್‍ಐವಿ ಏಡ್ಸ್ ಬಗ್ಗೆ ಜಾಗೃತಿ ಹೊಂದಿರಬೇಕು. ಇದು ಹರಡದಂತೆ ಗಮನಹರಿಸಬೇಕು ಎಂದು ಸಲಹೆ ಮಾಡಿದರು.
ಜಾಥಾವು ನಗರದ ಜನರಲ್ ತಿಮ್ಮಯ್ಯ, ಮಂಗೇರಿರ ಮುತ್ತಣ್ಣ, ಸ್ಕ್ವಾರ್ಡನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಸರ್ಕಾರಿ ಜೂನಿಯರ್ ಕಾಲೇಜು ತಲುಪಿತು. (ಜಿ.ಕೆ,ಎಸ್.ಎಚ್)
ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ ತರಂಗ-2022-ಉದ್ಘಾಟನೆ | ಸುದ್ದಿ ಪುತ್ತೂರು : Undefined index: color in /home/suddinew/public_html/puttur2k16/wp-content/themes/multinews/framework/functions/multinews.php on line 506
ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ ತರಂಗ-2022-ಉದ್ಘಾಟನೆ
ಪುತ್ತೂರು : ವ್ಯಕ್ತಿ ಬದುಕನ್ನು ರೂಪಿಸುವುದರಲ್ಲಿ ಶಿಕ್ಷಣಕ್ಕೆ ಪ್ರಮುಖ ಪಾತ್ರವಿದೆ. ವಿದ್ಯಾರ್ಥಿ ಜೀವನದಲ್ಲಿ ನಾವೇನು ಕಲಿಯುತ್ತೇವೆಯೋ ಅದು ನಮ್ಮ ಭವಿಷ್ಯವನ್ನು ರೂಪಿಸುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆಯಲಿ ಎಂಬ ಕಾರಣ ಶಿಕ್ಷಣ ಸಂಸ್ಥೆಗಳು ಅನೇಕ ರೀತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುತ್ತದೆ. ಕಾರ್ಯಾಗಾರಗಳು ಪಠ್ಯಕ್ಕೆ ಸಂಬಂಧಿಸಿದ್ದಾಗಿರಬಹುದು ಅಥವಾ ಬದುಕನ್ನು ರೂಪಿಸುವ ಬಗೆ ಹೇಗೆ ಎಂಬ ಕುರಿತಾಗಿರಬಹುದು. ಇಂತಹ ಕಾರ್ಯಾಗಾರಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗಲು ಸಾಧ್ಯ ಎಂದು ಪುತ್ತೂರು ನಗರ ಸಭೆಯ ಅಧ್ಯಕ್ಷ ಜೀವಂಧರ ಜೈನ್ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ 10ನೇ ತರಗತಿ ಪರೀಕ್ಷೆ ಬರೆದು ಪ್ರಥಮ ಪಿಯುಸಿ ಸೇರ ಬಯಸುವ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಮೂರು ದಿನಗಳ ಕಾರ್ಯಾಗಾರ ತರಂಗ-2022 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಕಾಂತ ಕೊಳತ್ತಾಯರವರು ಮಾತನಾಡಿ ಶೈಕ್ಷಣಿಕ ಕಾಲ ಘಟ್ಟದಲ್ಲಿ ಪಠ್ಯದ ಜೊತೆಗೆ ಇನ್ನಿತರ ಚಟುವಟಿಕೆಗಳಲ್ಲಿ ನಮ್ಮನ್ನು ಹೆಚ್ಚು ಸಕ್ರಿಯರಾಗಿಸುವ ಬಗ್ಗೆ ಚಿಂತನೆ ನಡೆಸಬೇಕಾಗಿದೆ. ಇಂತಹ ಕಾರ್ಯಾಗಾರದಲ್ಲಿ ಹೆಚ್ಚು ಭಾಗವಹಿದ್ದಲ್ಲಿ ವಿದ್ಯಾರ್ಥಿಗಳು ಕ್ರಿಯಾತ್ಮಕ ಯೋಚನೆಗಳಿಗೆ ತಮ್ಮನ್ನು ತೆರೆದುಕೊಳ್ಳುತ್ತಾರೆ. ಈ ಮೂಲಕ ವಿದ್ಯಾರ್ಥಿಗಳು ತಮಗೆ ಅವಶ್ಯವಿರುವ ಮಾಹಿತಿಯನ್ನು ಪಡೆದುಕೊಂಡು ತಮ್ಮ ಯೋಚನೆಗಳನ್ನು ಕ್ರಿಯಾತ್ಮಕವಾಗಿ ಬದಲಾಯಿಸಿಕೊಳ್ಳಬಹುದು. ಬದುಕಿನ ಧ್ಯೇಯವನ್ನು ಮರೆಯದೆ ಗೆಲುವಿನತ್ತ ಮುನ್ನುಗ್ಗಿದರೆ ಜೀವನ ಸಾರ್ಥಕವಾಗುತ್ತದೆ. ಎಂದು ಹೇಳಿದರು. ಕಾರ್ಯಾಗಾರದಲ್ಲಿ ಪುತ್ತೂರು,ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಗಳಿಂದ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಸಂತೋಷ ಬಿ., ಕಾರ್‍ಯಕ್ರಮದ ಸಂಪನ್ಮೂಲ ವ್ಯಕ್ತಿ ಜೆಸಿಐಯ ರಾಷ್ಟ್ರೀಯ ತರಬೇತುದಾರ ಡಾ.ರಾಜೇಶ್ ಬೆಜ್ಜಂಗಳ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ ಮಾತನಾಡಿ ಆಧುನಿಕ ಹಾಗೂ ಸ್ಪರ್ಧಾತ್ಮಕ ಜಗತ್ತಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಿಕೊಳ್ಳಲು ಶಿಕ್ಷಣದ ಜೊತೆಗೆ ಕಾರ್ಯಾಗಾರಗಳ ಅವಶ್ಯಕತೆಯಿದೆ. ಶಿಕ್ಷಣ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಗಳಿದ್ದು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು.ಸಮಾಜದ ಆಸ್ತಿಗಳಾಗಿ ಹೊರಹೊಮ್ಮಬೇಕಾಗಿದೆ ಎಂದು ಹೇಳಿದರು. ಉಪನ್ಯಾಸಕಿ ರೇಣುಕಾ ವಂದಿಸಿದರು. ಮಧುರಾ ಕಾರ್‍ಯಕ್ರಮ ನಿರೂಪಿಸಿದರು.
ದುಬೈನಲ್ಲಿ #1 ಉನ್ನತ ಕಾನೂನು ಸಂಸ್ಥೆಗಳು | ಯುಎಇ ಕಾನೂನು ಸಂಸ್ಥೆಗಳು ಮತ್ತು ವಕೀಲರು | ಪ್ರಶಸ್ತಿ ಕಾನೂನು ಸಂಸ್ಥೆ
ಯುಎಇಯ ದುಬೈನಲ್ಲಿ # 1 ಉನ್ನತ ಕಾನೂನು ಸಂಸ್ಥೆ
ಯುಎಇಯಲ್ಲಿ ಕಾನೂನು ಸಂಸ್ಥೆಯನ್ನು ಆಯ್ಕೆ ಮಾಡುವ ಸಲಹೆಗಳು
ದುಬೈನಲ್ಲಿ ಅತ್ಯುತ್ತಮ ಕಾನೂನು ಸಂಸ್ಥೆ
ನಿಮಗಾಗಿ, ನಿಮ್ಮ ಕುಟುಂಬಕ್ಕೆ ಅಥವಾ ನಿಮ್ಮ ಕಂಪನಿಗೆ ಕಾನೂನು ಸಲಹೆ ಪಡೆಯುತ್ತಿರಲಿ, ಕಾನೂನು ಸಂಸ್ಥೆಯನ್ನು ನಿರ್ಧರಿಸುವಲ್ಲಿ ಸರಿಯಾದ ಶ್ರದ್ಧೆ ನಡೆಸುವುದು ಅತ್ಯಗತ್ಯ. ದುಬೈನ ವಿವಿಧ ಕಾನೂನು ಸಂಸ್ಥೆಗಳೊಂದಿಗೆ ಇದು ಕಠಿಣ ಪ್ರಕ್ರಿಯೆಯಂತೆ ಕಾಣಿಸಬಹುದು.
ಉತ್ತಮ ವಕೀಲರನ್ನು ಹುಡುಕುವುದು ಫೋನ್ ಪುಸ್ತಕದಿಂದ ಯಾದೃಚ್ law ಿಕ ಕಾನೂನು ಸಂಸ್ಥೆಯನ್ನು ಆರಿಸುವುದನ್ನು ಅಥವಾ ನಿಮ್ಮ ಹತ್ತಿರದವರನ್ನು ಕರೆಯುವುದನ್ನು ಮೀರಿದೆ. ನಿಮ್ಮ ನಿರ್ದಿಷ್ಟ ಅಗತ್ಯಗಳನ್ನು ನೀವು ಪರಿಗಣಿಸಬೇಕು ಮತ್ತು ಆ ಅಗತ್ಯಗಳನ್ನು ಪೂರೈಸುವಲ್ಲಿ ಅನುಭವವಿರುವ ಕಾನೂನು ಸಂಸ್ಥೆಗೆ ಹೊಂದಿಕೆಯಾಗಬೇಕು.
ದುಬೈನಲ್ಲಿ, ವಕೀಲರನ್ನು ಅವರ ಕಾರ್ಯಗಳಿಗೆ ಅನುಗುಣವಾಗಿ ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ - ಕಾನೂನು ಸಲಹೆಗಾರರು ಮತ್ತು ವಕೀಲರು.
ಕಾನೂನು ಸಲಹೆಗಾರನು ಕಾನೂನು ನ್ಯಾಯಾಲಯದ ಮುಂದೆ ಕಾನೂನು ಅಭ್ಯಾಸ ಮಾಡುವುದಿಲ್ಲ. ಅವರು ಸಾಮಾನ್ಯವಾಗಿ ವ್ಯವಹಾರ ಮತ್ತು ಇತರ ಕ್ಷೇತ್ರಗಳಿಗೆ ಸಂಬಂಧಿಸಿದ ಕಾನೂನು ಉದ್ಯೋಗಗಳನ್ನು ನಿರ್ವಹಿಸುತ್ತಾರೆ. ಅವರು ಒಪ್ಪಂದಗಳನ್ನು ಸಿದ್ಧಪಡಿಸುತ್ತಾರೆ ಮತ್ತು ವ್ಯಾಪಾರ ವಹಿವಾಟಿನ ಕಾನೂನುಬದ್ಧತೆಯನ್ನು ನಿರ್ಣಯಿಸುತ್ತಾರೆ. ಮತ್ತೊಂದೆಡೆ, ವಕೀಲರು ನ್ಯಾಯಾಲಯದಲ್ಲಿ ಹಾಜರಾಗುವ ವಕೀಲರು. ಅವರ ಕೆಲಸವು ತಮ್ಮ ಗ್ರಾಹಕರ ಹಕ್ಕುಗಳನ್ನು ರಕ್ಷಿಸುವುದು ಅಥವಾ ಜಾರಿಗೊಳಿಸುವುದು.
ದುಬೈನಲ್ಲಿರುವ ಪ್ರತಿಯೊಂದು ಕಾನೂನು ಸಂಸ್ಥೆಯು ವಕಾಲತ್ತು ಮತ್ತು ಕಾನೂನು ಸಲಹಾ ಪರವಾನಗಿಯನ್ನು ಹೊಂದಿಲ್ಲ. ಹೆಚ್ಚಿನವರು ಕೇವಲ ಕಾನೂನು ಸಲಹೆಯ ಪರವಾನಗಿಯನ್ನು ಹೊಂದಿದ್ದಾರೆ. ಆ ಪರವಾನಿಗೆಯನ್ನು ಮಾತ್ರ ಹೊಂದಿರುವುದರಿಂದ ಆ ಕಾನೂನು ಸಂಸ್ಥೆಯ ವಕೀಲರು ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಿಲ್ಲ. ಮತ್ತೊಂದೆಡೆ, ವಕೀಲರು ಮತ್ತು ಕಾನೂನು ಸಲಹಾ ಪರವಾನಗಿ ವಕೀಲರು ನ್ಯಾಯಾಲಯದ ಪ್ರಕರಣಗಳಲ್ಲಿ ಹಾಜರಾಗಲು ಅಧಿಕಾರ ನೀಡುತ್ತಾರೆ.