text
stringlengths
0
61.5k
ನರೇಗಲ್ಲನಲ್ಲಿ 'ಕಡಬಡ' ಸೋಗು ನೃತ್ಯ
ಮುಳಗುಂದ: ಕೃಷಿಯಲ್ಲಿ ಆಧುನಿಕ, ಸುಧಾರಿತ ಹಾಗೂ ನವೀನ ತಾಂತ್ರಿಕ ಬೇಸಾಯದಿಂದ ಹೆಚ್ಚು ಬೆಳವಣಿಗೆ ಸಾಧ್ಯ. ನೀರಿನ ಸದ್ಬಳಕೆ ಹಾಗೂ ಸಿರಿಧಾನ್ಯಗಳನ್ನು ಬೆಳೆದು ಆರೋಗ್ಯ...
ಗದಗ: ಅಪರೂಪದ ಔಷಧೀಯ ಸಸ್ಯ ಕಾಶಿ, ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಖ್ಯಾತಿ ಹೊಂದಿರುವ ಜಿಲ್ಲೆಯ ಕಪ್ಪತ್ತಗುಡ್ಡವನ್ನು ಸರಕಾರ ಇತ್ತೀಚೆಗೆ ವನ್ಯಜೀವಿ ಧಾಮವೆಂದು...
ಚುನಾವಣೆಯೇ ಮುಹೂರ್ತ | Prajavani
ಚುನಾವಣೆಯೇ ಮುಹೂರ್ತ
ಸಾಮಗ ದತ್ತಾತ್ರಿ
'ಕೇಂದ್ರವು ಕಾಂಗ್ರೆಸ್ ಮುಖಂಡರನ್ನೇ ಗುರಿಯಾಗಿಸಿಕೊಂಡು ಐ.ಟಿ. ದಾಳಿ ನಡೆಸುತ್ತಿದೆ. ಚುನಾವಣೆ ಸಂದರ್ಭದಲ್ಲಿ ಉದ್ದೇಶಪೂರ್ವಕ ದಾಳಿ ನಡೆಸಲಾಗುತ್ತಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಈ ಟೀಕೆಗೆ ಪ್ರತ್ಯುತ್ತರ ನೀಡಿರುವ ಪ್ರಧಾನ ಮುಖ್ಯ ತೆರಿಗೆ ಕಮಿಷನರ್, 'ಆದಾಯ ತೆರಿಗೆ ದಾಳಿಯು ರಾಜಕೀಯ ಪ್ರೇರಿತವೆಂದು ಆರೋಪಿಸುವವರು ತಾಕತ್ತಿದ್ದರೆ ಇಲಾಖೆಯ ಕ್ರಮವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಿ' ಎಂದು ಸವಾಲೆಸೆದಿದ್ದಾರೆ (ಪ್ರ.ವಾ., ಮಾ 23).
ಕಾಂಗ್ರೆಸ್‌ನವರು ಮಾ. 22 ರಂದು ಆದಾಯ ತೆರಿಗೆ ಇಲಾಖೆಗೆ ಮುತ್ತಿಗೆ ಹಾಕಲು ದೊಡ್ಡ ಜಾಥಾ ಏರ್ಪಡಿಸಿದ್ದರು. ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಅಂದು ಸಚಿವ ಡಿ.ಕೆ. ಶಿವಕುಮಾರ್‌ ಅವರ ಪ್ರಕರಣ ವಿಚಾರಣೆಗೆ ಬಂದಿತ್ತು ಎನ್ನುವುದು ಇಲ್ಲಿ ಗಮನಾರ್ಹ. ಇದರಿಂದ ಯಾರು ಯಾರ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದಾರೆ ಎನ್ನುವುದು ತಾನಾಗಿಯೇ ಸ್ಪಷ್ಟವಾಗುವುದಲ್ಲವೇ?
ವ್ಯವಹಾರಗಳೆಲ್ಲ ಪಾರದರ್ಶಕವಾಗಿದ್ದು, ಕ್ರಮವಾಗಿ ತೆರಿಗೆ ಪಾವತಿಸುವವರು ಐ.ಟಿ. ದಾಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ. ಇಲಾಖೆಯ ಕ್ರಮವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವ ಅಧಿಕಾರ ದಾಳಿಗೊಳಗಾದ ವ್ಯಕ್ತಿಗೆ ಇದ್ದೇ ಇದೆ. ಒಂದು ದಾಳಿ ನಡೆಸಬೇಕಾದರೆ ಹಲವು ತಿಂಗಳ ಪೂರ್ವತಯಾರಿ ಬೇಕಾಗುತ್ತದೆ. ಆದ್ದರಿಂದ ದಾಳಿಗಳು ಯಾರದೋ ಲಹರಿಗಾಗಿ ಕೈಗೊಳ್ಳುವ ತಮಾಷೆಗಳಲ್ಲ. ತುರ್ತು ಪರಿಸ್ಥಿತಿಯಲ್ಲಿ ಇಂಥ ದಾಳಿಗಳು ನಡೆದಿದ್ದವು. ಕೆಲವು ಅಧಿಕಾರಿಗಳು ಬೆಲೆ ತೆತ್ತರು. ರಾಜಕಾರಣಿಗಳು?... ನಿರುಮ್ಮಳ!
ಇನ್ನೊಂದು ಮುಖ್ಯ ವಿಷಯ: ನಮ್ಮಲ್ಲಿ ಚುನಾವಣೆ ಬಂತೆಂದರೆ ಹಣದ ಹೊಳೆ ಹರಿಯುತ್ತದೆ. ಈಗಾಗಲೇ ವರದಿಯಾಗಿದೆಯಲ್ಲ 'ಉಡುಗೊರೆಗಳ ಕೊಡುಗೆಯ ಸಂಭ್ರಮ!' ಈ ಸಮಯದಲ್ಲಿ ಕಪ್ಪುಹಣದ ಪ್ರಸರಣ ಇರುತ್ತದೆ ಎನ್ನುವುದು ಸತ್ಯಸ್ಯಸತ್ಯ. ಎಂದೇ, ತೆರಿಗೆ ದಾಳಿಗಳು ಪ್ರಸ್ತುತವಾಗುವುದು ಮತ್ತು ಅವು ತಪ್ಪದೇ ನಡೆಯಬೇಕಾದವು. ರಾಜಕೀಯ ಪಕ್ಷಗಳು ಆಕ್ಷೇಪಿಸುತ್ತವೆ ಎಂದು ದಾಳಿ ಕೈಬಿಡುವುದೇ?
ಇಂದು ನಡೆದ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಏನೇನು ನಡೆಯಿತು? ಇಲ್ಲಿದೆ ಮಾಹಿತಿ - Public TV
ಇಂದು ನಡೆದ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಏನೇನು ನಡೆಯಿತು? ಇಲ್ಲಿದೆ ಮಾಹಿತಿ
ಹುಬ್ಬಳ್ಳಿ: ನಗರದಲ್ಲಿ ಇಂದು ಏರ್ಪಡಿಸಲಾಗಿದ್ದ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಸಮಾವೇಶ ಒಂದು ಕಡೆ ಯಶಸ್ವಿಯಾದರ ಮತ್ತೊಂದು ಕಡೆ ಭಾರೀ ವಿವಾದಕ್ಕೆ ಕಾರಣವಾಗಿದೆ.
ಸಮಾವೇಶದಲ್ಲಿ ಭಾಗವಹಿಸಿದ್ದ ಸ್ವಾಮೀಜಿಗಳು ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದರು. ಸಮಾವೇಶದಲ್ಲಿ ಭಾಗವಹಿಸಿದ್ದ ಪಂಚಮಸಾಲಿ ಪೀಠದ ಮೃತ್ಯುಂಜಯ ಸ್ವಾಮೀಜಿಗಳು ಮಾತನಾಡುತ್ತಾ ಒಂದು ತಂದೆಗೆ ಹುಟ್ಟಿದವರು ಲಿಂಗಾಯತರು ಐದು ಜನಕ್ಕೆ ಹುಟ್ಟಿದವರು ವೀರಶೈವರ ಎನ್ನುವ ಮೂಲಕ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಭಾಷಣ ವೇಳೆ ಅವೇಶಭರಿತರಾಗಿ ಮಾತನಾಡಿದ ಅವರು ಮನುವಾದಿಗಳ ಕುತಂತ್ರಕ್ಕೆ ತಕ್ಕ ಉತ್ತರವನ್ನು ಬಸವರಾಜ ಹೊರಟ್ಟಿ ಹಾಗೂ ವಿನಯ್ ಕುಲಕರ್ಣಿಯವರು ಕೊಟ್ಟಿದ್ದಾರೆ. ಹುಬ್ಬಳ್ಳಿ ಅಂದರೆ ಸಾಕಷ್ಟು ಇತಿಹಾಸ ಪುರುಷರಿಗೆ ಜನ್ಮ ನೀಡಿದೆ. ಲಿಂಗಾಯತರಿಗೆ ಯಾವಾಗಲೂ ಬಸವಣ್ಣನೇ ತಂದೆಯಾಗಿರುತ್ತಾನೆ ಎಂದು ಹೇಳಿದ್ದಾರೆ.
ಇನ್ನು ಈ ರೀತಿ ವಿವಾದಾತ್ಮಕ ಹೇಳಿಕೆ ನೀಡಿದ ಮರುಕ್ಷಣವೇ ಸ್ವಾಮೀಜಿ ತಮ್ಮ ಹೇಳಿಕೆಗೆ ಉಲ್ಟಾ ಹೊಡೆದಿದ್ದಾರೆ. ತಮ್ಮ ಹೇಳಿಕೆ ಕುರಿತು ಸ್ಪಷ್ಟಣೆ ನೀಡಿದ ಸ್ವಾಮೀಜಿ, ಬಸವಣ್ಣನವರ ಅನುಯಾಯಿಗಳು ಒಬ್ಬ ತಂದೆ ಇದ್ದ ಹಾಗೆ, ವೀರಶೈವರು ಪಂಚ ಪೀಠದ ಅನುಯಾಯಿಗಳು ಅವರು ಐದು ಜನರ ಆರಾಧಕರು ಹೀಗಾಗಿ ಅವರು ಐದು ತಂದೆಯ ಮಕ್ಕಳು ಎಂದು ಹೇಳಿದೆ. ಆದರೆ ಯಾವುದೇ ಸಮುದಾಯದ ಜನರಿಗೆ ನೋವು ಉಂಟು ಮಾಡುವುದು ನನ್ನ ಉದ್ದೇಶವಲ್ಲ. ಯಾರು ನನ್ನ ಮಾತನ್ನು ತಪ್ಪಾಗಿ ತಿಳಿಯಬೇಡಿ ಇದಕ್ಕೆ ನಾನು ವಿಷಾದ ವ್ಯಕ್ತಪಡಿಸುತ್ತೇನೆಂದು ಸ್ಪಷ್ಟಣೆ ನೀಡಿದ್ದಾರೆ.
ಧರ್ಮಕ್ಕಾಗಿ ಹೋರಾಟ ಘೋಷಣೆ: ಅದು ಕಳೆದ ನಾಲ್ಕೈದು ತಿಂಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಪ್ರತ್ಯೇಕ ಧರ್ಮದ ಹೋರಾಟ ಕೆಲವು ರಾಜಕೀಯ ಮನ್ವಂತರಕ್ಕೆ ನಾಂದಿ ಹಾಡಿದೆ. ರಾಜ್ಯ ವಿಧಾನಸಭೆ ಚುನಾವಣೆ ಸಮೀಪವಾಗುತ್ತಿದ್ದಂತೆ ಪ್ರತ್ಯೇಕ ಧರ್ಮ ಕೂಗೂ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶಕ್ಕೆ ಸಾಗರೋಪಾದಿಯಲ್ಲಿ ಜನರು ಹರಿದು ಬಂದಿದ್ದರು. ಸಮಾವೇಶದದ ಯಾವ ಭಾಗದಲ್ಲಿ ನೋಡಿದರು ಜನ ಸಾಗರ ಕೈಯಲ್ಲಿ ಕೆಂಪು ಬಾವುಟ ಹಿಡಿದಕೊಂಡು ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಒಗ್ಗಟಾಗಿ ಹೋರಾಟ ನಡೆಸುವ ದೃಶ್ಯಗಳು ಕಂಡು ಬಂತು. ಇಂದು ನಡೆದ ಹೋರಾಟ ಲಿಂಗಾಯತ ಪ್ರತ್ಯೇಕ ಧರ್ಮದ ಸ್ಥಾಪನೆಯ ಸೆಮಿಪೈನಲ್ ಆಗಿ ಕಂಡು ಬಂತು. ಈ ಹಿಂದೆ ಬೀದರ್, ಕಲಬುರಗಿ, ಬೆಳಗಾವಿ ಯಲ್ಲಿ ನಡೆದ ಸಮಾವೇಶಗಳು ಇದಕ್ಕೆ ಸಾಕ್ಷಿಯಾಗಿವೆ. ಸಮಾವೇಶದಲ್ಲಿ ನಿರಂತರವಾಗಿ ಬಸವಣ್ಣನ ಅನುಯಾಯಿಗಳು ಎಲ್ಲರ ತಲೆಯ ಮೇಲೆ ಧರ್ಮಕ್ಕಾಗಿ ಹೋರಾಟ ಅನ್ನೋ ಘೋಷಣೆಗಳನ್ನು ಕೂಗಿದರು.
ಶಪಥ: ಇಂದು ಬೆಳ್ಳಗೆ 11 ಗಂಟೆಗೆ ಬಸವಣ್ಣನ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಆರಂಭವಾದ ಕಾರ್ಯಕ್ರಮದಲ್ಲಿ ಲಿಂಗಯತ ಧರ್ಮಕ್ಕೆ ಸಂಬಂಧಪಟ್ಟ ಸಂಸ್ಕ್ರತ ಗ್ರಂಥ ಹಾಗೂ ವಚನ ಸಾಹಿತ್ಯ ಪುಸ್ತಕಗಳನ್ನು ಚಿತ್ರದುರ್ಗದ ಮುರುಘಾ ಶ್ರೀಗಳಿಂದ ಬಿಡುಗಡೆ ಮಾಡಲಾಯಿತು. ನಂತರ ವೇದಿಕೆಯಲ್ಲಿದ್ದ ಗಣ್ಯರು ಸೇರಿ ಎಲ್ಲರೂ ಒಟ್ಟಾಗಿ ಲಿಂಗಾಯತ ಧರ್ಮಕ್ಕಾಗಿ ನಡೆಯುತ್ತಿರೋ ಹೋರಾಟ ಪ್ರತ್ಯೇಕ ಧರ್ಮ ಆಗೋವರೆಗೂ ಹಿಂದೆ ಸರಿಯುವುದಿಲ್ಲ ಎನ್ನುವ ಶಪಥ ಮಾಡಿದರು.
ಈ ವೇಳೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಲಿಂಗಾಯತ ಏಜುಕೇಷನ್ ಸೊಸೈಟಿಯ ಪ್ರಭಾಕರ್ ಕೊರೆ ಹಾಗೂ ವಿಪಕ್ಷ ನಾಯಕ ಶೆಟ್ಟರ್ ವಿರುದ್ಧ ವಾಗ್ಧಾಳಿ ನಡೆಸಿದರು. ನೀವು ಚುನಾವಣೆ ಗೆಲ್ಲಲು, ಲಿಂಗಾಯತ ವೋಟ್ ಬ್ಯಾಂಕ್ ಬೇಕು ಆಂದರೆ ನೀವು ವೀರಶೈವರ ಬಾಲ ಹಿಡಿದುಕೊಂಡು ಬೇಡಿ. ಲಿಂಗಾಯತ ಧರ್ಮದಲ್ಲಿ 99 ಒಳ ಪಂಗಡಗಳನ್ನು ಹೊಂದಿದ್ದು, ಇದರಲ್ಲಿ ವೀರಶೈವ ಸೇರಿದೆ. ಇಲ್ಲಿ ಸೇರಿರುವ ಎಲ್ಲಾ ಮುಖಂಡರ ಜಾತಿ ಪ್ರಮಾಣ ಪತ್ರದಲ್ಲಿ ಲಿಂಗಾಯತ ಎಂದಿದೆ. ವಿನಯ್ ಕುಲಕರ್ಣಿ, ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ್ ಹೊರಟ್ಟಿ ಅವರ ಪ್ರಮಾಣ ಪತ್ರದಲ್ಲಿಯೂ ಲಿಂಗಾಯತ ಎಂದಿದೆ. ವೀರಶೈವ ಎಂದು ಎಲ್ಲಿಯೂ ದಾಖಲಾಗಿಲ್ಲ ಎಂದು ಟೀಕೆ ಮಾಡಿದರು.
ಬಳಿಕ ನೆಹರು ಮೈದಾನದಿಂದ ಎಲ್ಲಾ ಲಿಂಗಾಯತ ಮುಖಂಡರು ಹಾಗೂ ಮಠಧೀಶರ ನೈತೃತ್ವದಲ್ಲಿ ಬೃಹತ್ ಮೆರವಣಿಗೆ ಮಾಡಲಾಯಿತು. ನೆಹರು ಮೈದಾನದಿಂದ ಲಕ್ಷ ಲಕ್ಷ ಸಂಖ್ಯೆಯಲ್ಲಿ ಹೊರಟ ಬಸವಣ್ಣನ ಅನುಯಾಯಿಗಳು ನಗರದ ಕೊಪ್ಪಿಕರ್ ರೋಡ್, ಕೋಯಿನ್ ರಸ್ತೆ ಮೂಲಕ ಚೆನ್ನಮ್ಮ ವೃತ್ತದವರೆಗೆ ನಡೆದು ರಾಣಿ ಚೆನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಶಕ್ತಿ ಪ್ರದರ್ಶನ ನೀಡಿದರು.
ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅನೇಕ ಸಚಿವರು ಮಠಾಧೀಶರು ಲಿಂಗಾಯತ ಧರ್ಮಕ್ಕಾಗಿ ನಡೆಯುತ್ತಿರುವ ಹೋರಾಟಕ್ಕೆ ಆದಷ್ಟು ಬೇಗ ಸರ್ಕಾರದಿಂದ ಮಾನ್ಯತೆ ಕೊಡಿಸುವುದಾಗಿ ಭರವಸೆ ನೀಡಿದರು. ಇನ್ನೂ ಸಮಾವೇಶದಲ್ಲಿ ಮಾತನಾಡಿದ ವಿವಿಧ ಮಠಾಧೀಶರು, ನಮ್ಮಲ್ಲಿ ವೀರಶೈವರೂ ಧರ್ಮ ಒಡೆಯುವ ಹುನ್ನಾರ ಮಾಡುತ್ತಿದ್ದಾರೆ. ನಮ್ಮಲ್ಲಿ ವೀರಶೈವ-ಲಿಂಗಾಯತ ಅಂತ ಇಷ್ಟು ದಿನ ತುಳಿದಿದ್ದಾರೆ. ಇನ್ನು ಮುಂದೆ ನಾವು ಯಾರು ಮೋಸ ಹೋಗಬಾರದು. ನಾವು ಯಾರು ರಾಜಕೀಯ ಲಾಭಕ್ಕಾಗಿ ಸಮಾವೇಶ ಮಾಡುತ್ತಿಲ್ಲ. ಬದಲಾಗಿ ನಮಗೆ ವೋಟು ಕೊಟ್ಟ ಜನರ ಋಣ ತೀರಿಸೋ ಕೆಲಸ ಮಾಡಿತ್ತಿದ್ದೇವೆ ಎಂದರು.
Related Topics:fighthublilingayatMinister MB PatilPublic TVಪಬ್ಲಿಕ್ ಟಿವಿಲಿಂಗಾಯತಸಚಿವ ಎಂ.ಬಿ ಪಾಟೀಲ್ಹುಬ್ಬಳ್ಳಿಹೋರಾಟ
ಸೋಲಿನ ಸರ ಮಾಲೆಗಳ ನಂತರ ಸಾಧಿಸುವ ಗೆಲುವಿನ ಪುಷ್ಪಮಾಲೆ | Readoo Kannada | ರೀಡೂ ಕನ್ನಡ
ಸೋಲಿನ ಸರ ಮಾಲೆಗಳ ನಂತರ ಸಾಧಿಸುವ ಗೆಲುವಿನ ಪುಷ್ಪಮಾಲೆ
ಧೈರ್ಯವಾಗಿ ಸೋಲನ್ನು ಒಪ್ಪಿಕೊಳ್ಳಿ:
ಸೋಲು ಗೆಲುವು ಒಂದೆ ನಾಣ್ಯದ ಎರಡು ಮುಖಗಳು ಸೋಲು ಎನ್ನುವುದು ಆಟದ ಒಂದು ಭಾಗವೇ ಆದರೂ ಸೋತವರೇನು ದುರ್ದೈವಿಗಳಲ್ಲ ಯಾರಾದರು ವಿಜಯಿಗಳಾಗಬೇಕಾದರೆ ಸೋಲುವವರಿರಬೇಕಲ್ಲವೆ? ಈ ಭಾರಿಯೂ ನೀವೇನಾದರು ಸೋತು ಸುಣ್ಣವಾಗಿದ್ದರೆ ಸಂಕಟ ಪಡುವ ಅಗತ್ಯವಿಲ್ಲ. ಒದಗಿ ಬಂದ ಸೋಲಿಗಾಗಿ ಸ್ವಲ್ಪ ಹೊತ್ತು ರೋಧಿಸಿ, ದೂರಿ, ಕೊರಗಿ ಮತ್ತು ವಿಷಾದಿಸಿ ಆದರೆ ಇವುಗಳಲ್ಲಿ ಮುಳುಗಿ ಖಿನ್ನತೆಯ ಮೃತ್ಯುವಿಗೆ ಆಹ್ವಾನಿಸುವುದು ಅಥವ ನಿಮ್ಮನ್ನು ನೀವೇ ಬಡಿದುಕೊಳ್ಳುವುದು ಎರಡೂ ಬೇಡ. ಅನುಭವಿಸುತ್ತಿರುವ ಈ ಸೋಲು ಜೀವನ ಪರ್ಯಂತದಲ್ಲ ಹಾಗೆ ನೀವೇನು ಅಯೋಗ್ಯ ವೃತ್ತಿಯಲ್ಲೇನು ಇಲ್ಲ. ಸಾಧಿಸಬೇಕಾದ ಕಾರ್ಯ ಸಂಧರ್ಬೋಚಿತ ಫಲಿತಾಂಶವನ್ನು ಒದಗಿಸಲಿಲ್ಲವೆಂದು ಭವಿಷ್ಯದ ಅಭ್ಯುದಯದ ದಿನಗಳಲ್ಲಿ ಹೇರಳವಾಗಿ ದೊರಕುವ ಅವಕಾಶಗಳಲ್ಲಿ ಸಾಧಿಸಿತೋರುವ ಛಲದಿಂದ ದಾಪುಗಾಲಿಡಿ.
ದೋಷಗಳನ್ನು ಮರುಪರಿಶೀಲಿಸಿ:
ಸೋಲಿಗೆ ಅರೆಕೊರೆಯಾದ ಪೂರ್ವ ಸಿದ್ಧತೆಯ ಪರಿಣಾಮವೋ ಅಥವ ದೋಷಪೂರಿತ ತಂಡದ ಬಳಕೆಯ ಕಾರಣವೋ ಎಂದು ಮರುಪರಿಶೀಲಿಸಿ,ತಂಡದೊಂದಿಗೆ ನಿಸ್ಸಂಕೋಚವಾಗಿ ಅಭಿಪ್ರಾಯ ಹಂಚಿಕೊಳ್ಳಿ. ಯೋಜನೆಗೆ ತಂಡದ ಪ್ರತಿಯೊಬ್ಬ ಸದಸ್ಯನ ಕೊಡುಗೆ ಬಗ್ಗೆ ತಿಳಿಹೇಳಿ ನಂತರದಲ್ಲಿ ಯೋಜನೆಯು ಮುರಿದು ಬೀಳಲು ಕಾರಣವನ್ನು ತಂಡದ ಹೇಳಿಕೆ, ಟೀಕೆಗಳಿಂದ ಗ್ರಹಿಸಿ. ಕೆಲವು ಬಾರಿ ಉನ್ನತ ಸ್ಥಾನದಲ್ಲಿರುವವರು ಪುಟ್ಟ ಪುಟ್ಟ ಸಂಗತಿಗಳು ಕೈಲಿರುವ ಯೋಜನೆಗೆ ನಗಣ್ಯವೆಂದು ತಾತ್ಸಾರ ಮಾಡಿರುತ್ತಾರೆ. ಇವುಗಳನ್ನು ಮರೆಯದೆ ಲೆಕ್ಕಕ್ಕೆ ತೆಗೆದುಕೊಳ್ಳುವುದು ಜಾಣತನ. ಬಹು ಮುಖ್ಯವಾಗಿ ತಂಡ ನಿಮ್ಮ ಕಣ್ತೆರೆಯುವುದು ನೀವು ಯಾವುದು ಸಣ್ಣ ವಿಷಯಗಳೆಂದು ಬಿಟ್ಟು ಬೀಗುತ್ತಿರುತ್ತಿರೋ ಅವನ್ನೆ, ಸ್ವಾರಸ್ಯವೆಂದರೆ ಈ ಸಣ್ಣ ವಿಷಯಗಳೇ ಸೋಲಿಗೆ ಕಾರಣವಾಗಿರುತ್ತವೆ. ತಂಡದೊಂದಿಗೆ ಆಪಾದನೆಯ ತಂತ್ರ ಉಪಯೋಗಿಸುವುದರಿಂದ ನಿಮ್ಮ ಕಾಲಿನ ಮೇಲೆ ನೀವೆ ಕಲ್ಚಪ್ಪಡಿ ಎಳೆದುಕೊಂಡಂತೆ, ನೆನಪಿರಲಿ ನೀವು ತಂಡದ ಒಬ್ಬ ಜವಾಬ್ದಾರಿಯುತ ಸದಸ್ಯ!
ನೂತನ ಮಾರ್ಗೋಪಾಯದ ಚಿಂತನೆ ನಡೆಸಿ:
ನಿರಾಸೆಯಿಂದ ಸಮಯ ವ್ಯರ್ಥ ಮಾಡಿ ಕೊಳೆತು ನಾರಿದ್ದು ಸಾಕು, ಇನ್ನು ಪ್ರತಿಕ್ಷಣವು ಅತ್ಯಮೂಲ್ಯ ನಿಮ್ಮ ಹಿಂದಿನ ಮಾರ್ಗಸೂಚಿಗೆ ಅಂಟಿಕೊಳ್ಳದೆ ತಾಜಾ ಮಾರ್ಗೋಪಾಯದ ಅಳವಡಿಸಿಕೊಳ್ಳಲು ಯತ್ನಿಸಿ. ಹೊಸ ಭರವಸೆಯೊಂದಿಗೆ ನವೀನ ರೀತಿಯಲ್ಲಿ ಮುನ್ನಡೆಯುವುದಕ್ಕೆ ಟೊಂಕಕಟ್ಟಿ ಮುಂದೆ ಸಾಗಿ ಹೋಗಿ ಗೆಲುವು ನಿಮ್ಮದೆ.
ಪರಿಸ್ಥಿತಿಯಿಂದ ಕೊಂಚ ದೂರ ಸರಿಯಿರಿ:
ತಂಡದ ಒಬ್ಬ ಸದಸ್ಯನಾಗಿಯೋ ಅಥವ ನಾಯಕನಾಗಿಯೋ ಸೋಲಿಗೆ ನೀವೇ ಕಾರಣ ಎಂದು ಎಣಿಸಿರಬಹುದು, ಇಡಿಯ ಜಗತ್ತೇ ಸೋಲಿಗೆ ನಿಮಗೆ ಸಂಭಂಧ ಕಲ್ಪಿಸಿ ದಿನಂಪ್ರತಿ ನೋಡುತ್ತಿದ್ದರೂ ಪರವಾಗಿಲ್ಲ ನೀವು ಸಹಜ ಸ್ಥಿತಿಗೆ ಮರಳಬೇಕಾದರೆ ಜಗತ್ತಿನ ಈ ವ್ಯಾಖ್ಯಾನವನ್ನು ಮರೆತು ಬಿಡಿ. ಈ ಪರಿಸ್ಥಿತಿಯಿಂದ ಕೊಂಚ ದೂರ ಸರಿದು ನಿಮ್ಮ ಜೀವನದ ಇತರ ಹಿರಿಮೆಯ ಕಾರ್ಯಕ್ಷೇತ್ರಗಳಲ್ಲಿ ವ್ಯಾಪಿಸಲು ಪ್ರಯತ್ನಿಸಿ,ಸೋಲು ನೀವು ಅಭ್ಯಾಸಿಸುತ್ತಿದ್ದ ಒಂದು ಯೋಜನೆಯಷ್ಟೆ. ಒಂದು ಹೆಜ್ಜೆ ಪಕ್ಕಕ್ಕೆ ಸರಿದು ವೈಪಲ್ಯ ಇಷ್ಟೇನಾ ಎಂದು ನಕ್ಕುಬಿಡಿ.
ಸಕಾರಾತ್ಮಕತೆಯ ಕಡೆಗೆ ದೃಷ್ಟಿಹರಿಸಿ:
ಗೆಲುವಿಗಿಂತ ತಪ್ಪುಗಳಿಗೆ ಜಾಸ್ತಿ ಕಿಮ್ಮತ್ತು! ಏಕೆ ಗೊತ್ತೆ? ನಿಮ್ಮ ತಂಡದ ಅತ್ಯುತ್ತಮ ಸದಸ್ಯನನ್ನು ಗುರುತಿಸಲು ಇಲ್ಲವೆ ನಿಮ್ಮ ಕಂಪನಿಯ ಸಾಮರ್ಥ್ಯ ಅಳೆಯಲು ಈ ತಪ್ಪುಗಳಿಂದ ಮಾತ್ರ ಸಾಧ್ಯ. ವೈಪಲ್ಯ ಹಿಂದಿಕ್ಕಿ ಮುಂದುವರಿಯುವ ಫ್ರೀವೇ ಮತ್ತು ಹೈಸ್ಪೀಡ್ ಬೈಕ್ ನಿಮ್ಮ ಮುಂದಿದೆ – ಆಯ್ಕೆ ನಿಮ್ಮದು!
ಮುಲಾಯಂ ಕೂಡ ಹೇಳಿದರು 'ಮತ್ತೊಮ್ಮೆ ಮೋದಿ' | News13
News13 > ಸುದ್ದಿಗಳು > ರಾಷ್ಟ್ರೀಯ > ಮುಲಾಯಂ ಕೂಡ ಹೇಳಿದರು 'ಮತ್ತೊಮ್ಮೆ ಮೋದಿ'
ಮುಲಾಯಂ ಕೂಡ ಹೇಳಿದರು 'ಮತ್ತೊಮ್ಮೆ ಮೋದಿ'
ನವದೆಹಲಿ: ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸದಾ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಕಿಡಿಕಾರುತ್ತಿದ್ದ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರು, ಇಂದು ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕು ಎಂಬ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ಇಂದು ಲೋಕಸಭಾದಲ್ಲಿ ಮಾತನಾಡಿದ ಅವರು, 'ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ನಾವು ಬಯಸುತ್ತಿದ್ದೇವೆ. ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗಲು ನಡೆಸುತ್ತಿರುವ ಅವರ ಪ್ರಯತ್ನಕ್ಕೆ ನನ್ನ ಶ್ಲಾಘನೆ ಇದೆ. ಅವರು ಅತ್ಯುತ್ತಮ ಕಾರ್ಯ ಮಾಡಿದ್ದಾರೆ. ಯಾರೊಬ್ಬರೂ ಅವರಿಗೆ ಬೆರಳು ತೋರಿಸಲು ಸಾಧ್ಯವಿಲ್ಲ' ಎಂದು ಹೇಳಿದ್ದಾರೆ.
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರ ಪಕ್ಕದಲ್ಲೇ ನಿಂತು, ಮುಲಾಯಂ ಅವರು ಮೋದಿಯ ಬಗ್ಗೆ ಶ್ಲಾಘನೆಯನ್ನು ವ್ಯಕ್ತಪಡಿಸಿದ್ದಾರೆ.
ಮುಲಾಯಂ ಪುತ್ರ ಅಖಿಲೇಶ್ ಸಿಂಗ್ ಯಾದವ್ ಅವರು, ಬಿಜೆಪಿಗೆ ಪ್ರಬಲ ಸ್ಪರ್ಧೆಯೊಡ್ಡುವ ಉದ್ದೇಶದೊಂದಿಗೆ ದೀರ್ಘ ಅವಧಿಯ ಶತ್ರು ಬಹುಜನ ಸಮಾಜವಾದಿ ಪಕ್ಷದೊಂದಿಗೆ ಕೈಜೋಡಿಸಿದ್ದಾರೆ. ಮಾತ್ರವಲ್ಲ, ಮಹಾಘಟ್‌ಬಂಧನ್ ನಾಯಕರೊಂದಿಗೆ ಅವರು ಕಾಣಿಸಿಕೊಂಡು ಸದಾ ಮೋದಿಯವ ವಿರುದ್ಧ ಕಿಡಿಕಾರುತ್ತಿರುತ್ತಾರೆ. ಆದರೀಗ ಅವರ ತಂದೆ ಮುಲಾಯಂ ಮೋದಿಯ ಬಗ್ಗೆ ಶ್ಲಾಘನೆಯ ಮಾತುಗಳನ್ನಾಡಿ ಎಲ್ಲರನ್ನೂ ಆಶ್ಚರ್ಯ ಚಕಿತಗೊಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಅಖಿಲೇಶ್ ಮತ್ತು ಮುಲಾಯಂ ಸಂಬಂಧ ಹದಗೆಟ್ಟಿದೆ ಎಂದು ಹೇಳಲಾಗುತ್ತಿದೆ. ಮಗನೊಂದಿಗೆ ವೇದಿಕೆ ಹಂಚಿಕೊಳ್ಳದೆಯೋ ಅವರು ತುಂಬಾ ದಿನಗಳಾಗಿದೆ. ಅಲ್ಲದೇ ಬಿಜೆಪಿ ವಿರುದ್ಧ ವಾಗ್ ಪ್ರಹಾರ ನಡೆಸುವುದನ್ನೂ ಅವರು ನಿಲ್ಲಿಸಿದಂತಿದೆ. ಹೀಗಾಗಿ ಸಮಾಜವಾದಿಯಲ್ಲಿ ಯಾವುದೂ ಸರಿಯಿಲ್ಲ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ.
2022ಕ್ಕೆ ಬಿಡುಗಡೆಯಾಗಲಿವೆ ನ್ಯೂ ಜನರೇಷನ್ ಆಡಿ ಎ3 ಮತ್ತು ಕ್ಯೂ3 ಕಾರುಗಳು - Kannada DriveSpark
Published: Wednesday, May 26, 2021, 8:45 [IST]
ಜರ್ಮನ್ ಕಾರು ಉತ್ಪಾದನಾ ಕಂಪನಿಯಾಗಿರುವ ಆಡಿ ತನ್ನ ಜನಪ್ರಿಯ ಕಾರು ಮಾದರಿಗಳಾದ ಎ3 ಮತ್ತು ಕ್ಯೂ3 ಕಾರು ಮಾದರಿಗಳನ್ನು ಹೊಸ ತಲೆಮಾರಿನ ವೈಶಿಷ್ಟ್ಯತೆಯೊಂದಿಗೆ ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಹೊಸ ಕಾರುಗಳು ಮುಂದಿನ ವರ್ಷ 2022ರ ಆರಂಭದಲ್ಲಿ ಭಾರತೀಯ ಮಾರುಕಟ್ಟೆ ಪ್ರವೇಶಿಸಲಿವೆ.
ಎ3 ಸೆಡಾನ್ ಮತ್ತು ಕ್ಯೂ3 ಎಸ್‌ಯುವಿ ಮಾದರಿಗಳ ಹೊಸ ಆವೃತ್ತಿಗಳನ್ನು ಕಳೆದ ವರ್ಷವೇ ಬಿಡುಗಡೆಯ ಯೋಜನೆಯಲ್ಲಿದ್ದ ಆಡಿ ಕಂಪನಿಯು ಕೋವಿಡ್ ಪರಿಣಾಮ ಮುಂದೂಡಿಕೆ ಮಾಡುತ್ತಾ ಬಂದಿತು. ಆದರೆ ಇದೀಗ ಈ ವರ್ಷ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದ ಕಂಪನಿಗೆ ಕೋವಿಡ್ ಎರಡನೇ ಅಲೆಯು ಮತ್ತೆ ಕುಸಿತ ಭೀತಿ ಉಂಟು ಮಾಡಿದ್ದು, ಈ ಹಿನ್ನಲೆಯಲ್ಲಿ ಹೊಸ ಕಾರುಗಳನ್ನು ಮುಂಬರುವ 2022ರ ವೇಳೆಗೆ ಬಿಡುಗಡೆ ಮುಂದೂಡಿಕೆ ಮಾಡಲಾಗಿದೆ.
ಬಿಎಸ್ 6 ಜಾರಿ ನಂತರ ಎ3 ಸೆಡಾನ್ ಮತ್ತು ಕ್ಯೂ3 ಎಸ್‌ಯುವಿ ಮಾದರಿಗಳ ಮಾರಾಟವನ್ನು ಸ್ಥಗಿತಗೊಳಿಸಿರುವ ಆಡಿ ಕಂಪನಿಯು ಬಿಎಸ್ 6 ಮಾದರಿಗಳ ಬಿಡುಗಡೆಗೆ ವೇಳೆಗೆ ಕೋವಿಡ್‌ನಿಂದಾದ ಆರ್ಥಿಕ ಸಂಕಷ್ಟದಿಂದಾಗಿ ಹೊಸ ಕಾರು ಬಿಡುಗಡೆಯನ್ನು ಸ್ಥಗಿತಗೊಳಿಸಿತ್ತು.
ಆದರೆ ಈ ವರ್ಷದ ಮಧ್ಯಂತರ ಬಿಡುಗಡೆ ಮಾಡುವ ಹೊತ್ತಿಗೆ ಮತ್ತೆ ಕೋವಿಡ್ ನಿಂದ ಆರ್ಥಿಕ ಸಂಕಷ್ಟವು ವಾಹನ ಉದ್ಯಮದ ಮೇಲೆ ಸಾಕಷ್ಟು ಪರಿಣಾಮ ಬೀರುವ ಭೀತಿಯಿಂದಾಗಿ ಹೊಸ ಕಾರುಗಳ ಬಿಡುಗಡೆ ಮುಂದೂಡಲಾಗುತ್ತಿದ್ದು, 2022ರ ಆರಂಭದಲ್ಲಿ ಎ3 ಸೆಡಾನ್ ಮತ್ತು ಕ್ಯೂ3 ಎಸ್‌ಯುವಿ ಮಾದರಿಗಳ ಬಿಡುಗಡೆಯು ಖಚಿತವಾಗಿದೆ.
ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿರುವ ನ್ಯೂ ಜನರೇಷನ್ ಎ3 ಸೆಡಾನ್ ಮತ್ತು ಕ್ಯೂ3 ಎಸ್‌ಯುವಿ ಮಾದರಿಗಳು ಮರುವಿನ್ಯಾಸಗೊಳಿಸಲಾದ ಡಿಸೈನ್ ಮತ್ತು ಹೊಸ ಎಂಜಿನ್ ಆಯ್ಕೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ.
ಆಡಿ ಹೊಸ ಕಾರುಗಳು ಮಾತೃಸಂಸ್ಥೆಯಾದ ಫೋಕ್ಸ್‌ವ್ಯಾಗನ್ ಕಂಪನಿಯ ಎಂಕ್ಯೂಬಿ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ನಿರ್ಮಾಣಗೊಳ್ಳಲಿದ್ದು, ಹೊಸ ಕಾರುಗಳು ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಾಗಿ ಪ್ರಮುಖ ಮೂರು ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿವೆ.
ಮಾಹಿತಿಗಳ ಪ್ರಕಾರ, ಆಡಿ ಕಂಪನಿಯು ಹೊಸ ಕಾರುಗಳಲ್ಲಿ ಯಾವುದೇ ಡೀಸೆಲ್ ಎಂಜಿನ್ ಪರಿಚಯಿಸುತ್ತಿಲ್ಲ ಎನ್ನಲಾಗಿದ್ದು, ಪೆಟ್ರೋಲ್ ಎಂಜಿನ್ ಮಾದರಿಗಳು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪ್ರೇರಣೆ ಹೊಂದಿರಲಿವೆ.
ಇನ್ನು ಆಡಿ ಇಂಡಿಯಾ ಕಂಪನಿಯು ತನ್ನ ಐಷಾರಾಮಿ ಕಾರುಗಳ ಸ್ಟ್ಯಾಂಡರ್ಡ್ ವಾರಂಟಿ ಅವಧಿಯನ್ನು ಮುಂದಿನ ಒಂದು ತಿಂಗಳಿಗೆ ಹೆಚ್ಚಿಸಿದ್ದು, ಲಾಕ್‌ಡೌನ್‌ನಲ್ಲಿ ಮುಕ್ತಾಯಗೊಳ್ಳಲಿದ್ದ ಸ್ಟ್ಯಾಂಡರ್ಡ್ ವಾರಂಟಿ ಮತ್ತು ಉಚಿತ ಸೇವೆಗಳನ್ನು ಜೂನ್ 30ರ ತನಕ ಮುಂದೂಡಿಕೆ ಮಾಡಿದೆ.
ಕೋವಿಡ್ 2ನೇ ಅಲೆ ಹೆಚ್ಚುತ್ತಿರುವ ಸಂದರ್ಭದಲ್ಲಿ ವಾಹನ ಮಾರಾಟಕ್ಕೆ ಕೆಲವು ಕಡೆಗಳಲ್ಲಿ ಷರತ್ತು ಬದ್ದ ಅವಕಾಶಗಳಿದ್ದರೂ ಗ್ರಾಹಕರ ಸೇವೆಗಳನ್ನು ಸರಿಯಾದ ಸಮಯಕ್ಕೆ ಪೂರೈಸುವುದು ಆಟೋ ಉತ್ಪಾದನಾ ಕಂಪನಿಗಳಿಗೆ ಸವಾಲಿನ ಕೆಲಸವಾಗಿದೆ.
ಇದರಿಂದ ಲಾಕ್‌ಡೌನ್ ಅವಧಿಯಲ್ಲಿ ನಿಗದಿತ ಅವಧಿಯ ಸೇವೆಗಳನ್ನು ಪಡೆದುಕೊಳ್ಳಬೇಕಿದ್ದ ವಾಹನಗಳ ವಾರಂಟಿ ಅವಧಿಯು ಮುಗಿದುಹೋಗಲಿದ್ದು, ಹೊಸ ವಾಹನ ಖರೀದಿದಾರರಿಗೆ ಆಡಿ ಇಂಡಿಯಾ ಕಂಪನಿಯು ಸಿಹಿಸುದ್ದಿ ನೀಡಿದೆ.
ದೊಡ್ಡಗಡಿಯಾರ ದುರಸ್ತಿಗೆ ಅನುಮೋದನೆ | Prajavani
ದೊಡ್ಡಗಡಿಯಾರ ದುರಸ್ತಿಗೆ ಅನುಮೋದನೆ
ರೈಲು ನಿಲ್ದಾಣ ಕಟ್ಟಡದ ನವೀಕರಣ ಕಾಮಗಾರಿ ತಾತ್ಕಾಲಿಕ ಸ್ಥಗಿತ
ಮೈಸೂರು: ನಗರದ ಪಾರಂಪರಿಕ ದೊಡ್ಡ ಗಡಿಯಾರದಲ್ಲಿ ಮೂಡಿರುವ ಬಿರುಕನ್ನು ಮುಚ್ಚಿ ಅದನ್ನು ದುರಸ್ತಿಗೊಳಿಸಲು ಇಲ್ಲಿ ಸೋಮವಾರ ನಡೆದ ಪಾರಂಪರಿಕ ತಜ್ಞರ ಸಮಿತಿ ಅನುಮೋದನೆ ನೀಡಿತು.
ಇದರ ಜತೆಗೆ, ರೈಲು ನಿಲ್ದಾಣ ಕಟ್ಟಡದ ನವೀಕರಣ ಕಾಮಗಾರಿಗೂ ತಜ್ಞರಿಂದ ಆಕ್ಷೇಪ ವ್ಯಕ್ತವಾಯಿತು. ಕೂಡಲೇ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ರೈಲ್ವೆ ಇಲಾಖೆ ಅಧಿಕಾರಿಗಳು ಒಪ್ಪಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದೊಡ್ಡ ಗಡಿಯಾರದ ಜತೆಗೆ ಜಯಲಕ್ಷ್ಮೀವಿಲಾಸ ಅರಮನೆ ದುರಸ್ತಿಗೂ ಹಸಿರು ನಿಶಾನೆ ತೋರಲಾಯಿತು. ನಂತರ, ದೊಡ್ಡ ಗಡಿಯಾರವನ್ನು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮತ್ತೊಮ್ಮೆ ಪರಿಶೀಲನೆ ನಡೆಸಲಾಯಿತು.
ಮಾನಸ ಗಂಗೋತ್ರಿಯಲ್ಲಿರುವ ಜಯಲಕ್ಷ್ಮೀವಿಲಾಸ ಅರಮನೆಯು ಹಲವು ವರ್ಷಗಳಿಂದ ದುರಸ್ತಿಯಾಗಿಲ್ಲ. ದಿನದಿಂದ ದಿನಕ್ಕೆ ಇದು ಶಿಥಿಲವಾಗುತ್ತಿದೆ. ಮೇ 23ರಂದು ಇದನ್ನು ಪರಿಶೀಲಿಸಲು ನಿರ್ಧರಿಸಲಾಯಿತು. ಮೈಸೂರು ವಿಶ್ವವಿದ್ಯಾಲಯ ಕುಲಪತಿ, ಕುಲಸಚಿವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿ, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಪರಿಶೀಲನಾ ತಂಡದಲ್ಲಿರುತ್ತಾರೆ. ಎಲ್ಲ ಪಾರಂಪರಿಕ ಕಟ್ಟಡಗಳಲ್ಲಿ ಅಗ್ನಿ ನಿರೋಧಕ ಸಾಧನಗಳನ್ನು ಅಳವಡಿಸಲೂ ಅನುಮೋದನೆ ನೀಡಲಾಯಿತು.
ದೊಡ್ಡ ಗಡಿಯಾರದಲ್ಲಿ ಬಿರುಕು; ಆತಂಕ
ದೊಡ್ಡ ಗಡಿಯಾರದ ಗೋಪುರದಲ್ಲಿ ಕಾಣಿಸಿಕೊಂಡಿರುವ ಬಿರುಕು ಕುರಿತು ಸಮಿತಿ ಸದಸ್ಯರು ಡ್ರೋನ್‌ ಮೂಲಕ ತೆಗೆದ ಛಾಯಾಚಿತ್ರ ಮತ್ತು ವಿಡಿಯೊ ತುಣುಕುಗಳನ್ನು ಪ್ರದರ್ಶಿಸಿದರು. ಒಂದು ವೇಳೆ ಈಗ ದುರಸ್ತಿ ಕಾರ್ಯ ಕೈಗೊಳ್ಳದಿದ್ದರೆ ಮುಂದೆ ಅನಾಹುತ ಸಂಭವಿಸಬಹುದು ಎಂದು ಎಚ್ಚರಿಕೆ ನೀಡಿದರು.
ಇದರ ಜತೆಗೆ, ಬೊಮ್ಮಾಯಿ ಛತ್ರದ ಸಂರಕ್ಷಣೆ, ಮೈಸೂರು ಮಹಾರಾಜ ಕಾಲೇಜಿನ ಕುಸಿದು ಬಿದ್ದಿರುವ ಕಾಂಪೌಂಡ್ ನಿರ್ಮಾಣ, ಸರ್ಕಾರಿ ಮನ್ಮಹಾರಾಜ ಸಂಸ್ಕೃತ ಕಾಲೇಜಿನಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ನೀಲನಕ್ಷೆ ಸಿದ್ಧಪಡಿಸಲು ಒಪ್ಪಿಗೆ ಸೂಚಿಸಲಾಯಿತು.
ಪಾಲಿಕೆ ವ್ಯಾಪ್ತಿಯ ಹಳೆಯ ಕಟ್ಟಡಗಳನ್ನು ಕೆಡವಲು ನಿರಪೇಕ್ಷಣಾ ಪತ್ರ ನೀಡುವ ಮುನ್ನ ಅದು ಪಾರಂಪರಿಕ ಕಟ್ಟಡವೋ ಅಥವಾ ಅಲ್ಲವೋ ಎನ್ನುವುದನ್ನು ಪರಿಶೀಲಿಸಿ ಪುರಾತತ್ವ ಇಲಾಖಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಪಾಲಿಕೆ ಆಯುಕ್ತರಾದ ಶಿಲ್ಪಾನಾಗ್, ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಉಪನಿರ್ದೇಶಕಿ ನಿರ್ಮಲಾ ಮಠಪತಿ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಎಚ್.ಪಿ.ಜನಾರ್ಧನ್, ಮೈಸೂರು ಪಾರಂಪರಿಕ ಪ್ರದೇಶ ಅಭಿವೃದ್ಧಿ ಮತ್ತು ಸಂರಕ್ಷಣೆಗಾಗಿ ರಚಿಸಲಾದ ತಜ್ಞರ ಸಮಿತಿ ಸದಸ್ಯರಾದ ಪ್ರೊ.ಎನ್.ಎಸ್.ರಂಗರಾಜು, ಮೇಜರ್ ಜನರಲ್ ಡಾ.ಎಸ್.ಜಿ.ಒಂಬತ್ಕೆರೆ, ಡಾ.ಚಂಪಾ ಅರಸ್, ಎಚ್.ಡಿ.ನಾಗೇಶ್, ಕಾವಾ ನಿವೃತ್ತ ಡೀನ್ ವಿ.ಎ.ದೇಶಪಾಂಡೆ, ಎನ್.ಆರ್.ಅಶೋಕ್, ಇತಿಹಾಸಕಾರ ಈಚನೂರು ಕುಮಾರ್ ಸೇರಿದಂತೆ ಹಲವರು ಸಭೆಯಲ್ಲಿ ಇದ್ದರು.
ಪರಿಹಾರ ಕೊಡಲು ಸರಕಾರದ ಬಳಿ ದುಡ್ಡಿಲ್ಲ! ಜಾತಿ ನಿಗಮ ಪ್ರಾಧಿಕಾರಕ್ಕೆ ದುಡ್ಡು ಎಲ್ಲಿಂದ ಬಂತು? | Udayavani – ಉದಯವಾಣಿ
ಪರಿಹಾರ ಕೊಡಲು ಸರಕಾರದ ಬಳಿ ದುಡ್ಡಿಲ್ಲ! ಜಾತಿ ನಿಗಮ ಪ್ರಾಧಿಕಾರಕ್ಕೆ ದುಡ್ಡು ಎಲ್ಲಿಂದ ಬಂತು?
Team Udayavani, Nov 18, 2020, 1:40 PM IST
ಬೆಂಗಳೂರು : ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಗ್ಯತೆ ಇಲ್ಲ. ವೃದ್ಧಾಪ್ಯವೇತನ,ವಿಧವಾ ವೇತನ, ಅಂಗವಿಕಲ ವೇತನಕ್ಕೆ ದುಡ್ಡಿಲ್ಲ, ಅತಿವೃಷ್ಟಿಯಿಂದ ಕಷ್ಟನಷ್ಟಕ್ಕೀಡಾಗಿರುವ ಜನ ಬೀದಿಯಲ್ಲಿದ್ದಾರೆ, ಕೋರೊನಾ ಸೋಂಕಿನಿಂದ ಜನ ಸಾಯುತ್ತಿದ್ದಾರೆ. ಇವೆಲ್ಲಕ್ಕೂ ಸರ್ಕಾರದ ಬಳಿ ಹಣ ಇಲ್ಲ ಆದರೆ ಜಾತಿ ನಿಗಮ-ಪ್ರಾಧಿಕಾರಕ್ಕೆ ನೂರಾರು ಕೋಟಿ ಎಲ್ಲಿಂದ ಬಂತು? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ
ಯಾವುದೇ ವೈಜ್ಞಾನಿಕ ಅಧ್ಯಯನಗಳಿಲ್ಲದೆ ಜಾತಿ ಆಧಾರಿತ ನಿಗಮ-ಪ್ರಾಧಿಕಾರ ಸ್ಥಾಪನೆ ಸಮಾಜ ವಿರೋಧಿ ಮಾತ್ರವಲ್ಲ ಪ್ರಜಾಪ್ರಭುತ್ವ ವಿರೋಧಿ ತೀರ್ಮಾನ ಕೂಡಾ ಹೌದು, ಜಾತಿ ಆಧಾರಿತ ನಿಗಮ ಪ್ರಾಧಿಕಾರ ಸ್ಥಾಪನೆ ಕುರಿತು ಮಾತನಾಡಿದ ಅವರು ಚುನಾವಣೆಗಳನ್ನು ಸಾಧನೆಯ ಬಲದಿಂದ ಗೆಲ್ಲಲಾಗದ ರಾಜ್ಯದ ಮತಿಹೀನ ಬಿಜೆಪಿ ಸರ್ಕಾರ ಇಂತಹ ಅಗ್ಗದ ತಂತ್ರ-ಕುತಂತ್ರಗಳನ್ನು ಮಾಡಿ ಸಮಾಜವನ್ನು ಒಡೆಯಲು ಹೊರಟಿದೆ ಎಂದಿದ್ದಾರೆ.
ಲಿಂಗಾಯತ ಅಭಿವೃದ್ದಿ ನಿಗಮ ಸ್ಥಾಪನೆಗೆ ನಮ್ಮ ವಿರೋಧ ಇಲ್ಲ. ಬಡತನ ಎಂಬುದು ಜಾತಿ-ಧರ್ಮಗಳನ್ನು ಮೀರಿದ್ದು. ಕೇವಲ ತಳಸಮುದಾಯಗಳಲ್ಲಿ ಮಾತ್ರವಲ್ಲ ಮೇಲ್ಜಾತಿಗಳಲ್ಲಿಯೂ ಬಡವರಿದ್ದಾರೆ. ಎಲ್ಲ ಜಾತಿ-ಧರ್ಮಗಳ ಬಡವರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ರೂಪಿಸುವ ಕಾರ್ಯಕ್ರಮಗಳನ್ನು ನಾನು ಸ್ವಾಗತಿಸುತ್ತೇನೆ. ಆದರೆ ಕೇವಲ ರಾಜಕೀಯ ಲಾಭಕ್ಕಾಗಿ ನಡೆಸುವ ಇಂತಹ ಕ್ಷುಲಕ ಬುದ್ದಿಯ ಕಸರತ್ತುಗಳನ್ನು ಉಗ್ರವಾಗಿ ಖಂಡಿಸುತ್ತೇನೆ ಎಂದರು.
ಇದನ್ನೂ ಓದಿ:ಸುರತ್ಕಲ್ : ಪ್ರಿಯತಮೆಯನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಹೂವಿನ ವ್ಯಾಪಾರಿ
ಬಡತನದ ನಿರ್ಮೂಲನೆಯ ಕಾರ್ಯಕ್ರಮಗಳಿಗೆ ವೈಜ್ಞಾನಿಕವಾದ ಅಧ್ಯಯನ ಆಧಾರಿತವಾಗಬೇಕು.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬಡತನ ನಿರ್ಮೂಲನೆಯ ಪ್ರಾಮಾಣಿಕ ಕಾಳಜಿ ಹೊಂದಿದ್ದರೆ, ಈಗಾಗಲೇ ಅವರ ಮುಂದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಒಪ್ಪಿಕೊಂಡು ಕಾರ್ಯಕ್ರಮಗಳನ್ನು ರೂಪಿಸಲಿ.
ಗಡಿಭಾಗದಲ್ಲಿ ಕನ್ನಡ ಮತ್ತು ಮರಾಠಿಗರ ನಡುವೆ ಆಗಾಗ ಸಂಘರ್ಷ ನಡೆದರೂ ರಾಜ್ಯದಾದ್ಯಂತ ಕನ್ನಡಿಗರು ಮತ್ತು ಮರಾಠಿಗರು ಪರಸ್ಪರ ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಈಗ ಮರಾಠ ಅಭಿವೃದ್ದಿ ಪ್ರಾಧಿಕಾರವನ್ನು ಘೋಷಿಸಿ ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸುವ ಮೂರ್ಖತನವನ್ನು ರಾಜ್ಯಸರ್ಕಾರ ಮಾಡಿದೆ. ಇದರಿಂದಾಗಿ ರಾಜ್ಯದ ಶಾಂತಿ-ಸುವ್ಯವಸ್ಥೆಗೆ ಭಂಗ ಉಂಟಾದಲ್ಲಿ ಅದಕ್ಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಹೊಣೆಯಾಗುತ್ತಾರೆ ಎಂದು ಗುಡುಗಿದರು.
ಇದನ್ನೂ ಓದಿ:ಬಿಳಿನೆಲೆ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ, ಅಪಾಯದಿಂದ ಪಾರಾದ ಯಾತ್ರಾರ್ಥಿಗಳು !
ನಾನು ಮುಖ್ಯಮಂತ್ರಿಯಾಗಿ ಅನುಷ್ಠಾನಗೊಳಿಸಿರುವ ಅನ್ನಭಾಗ್ಯ,ಕ್ಷೀರಭಾಗ್ಯ,ಕ್ಷೀರಧಾರೆ,ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಯಾವ ಕಾರ್ಯಕ್ರಮವೂ ನಿರ್ದಿಷ್ಠ ಜಾತಿ-ಧರ್ಮಕ್ಕೆ ಸೀಮಿತವಾದುದಲ್ಲ. ಇವೆಲ್ಲವೂ ಸರ್ವಜನಾಂಗದ ಬಡವರ ಕಲ್ಯಾಣ ಕಾರ್ಯಕ್ರಮಗಳು. ರಾಜಕೀಯ ದ್ವೇಷದಿಂದ ಈ ಕಾರ್ಯಕ್ರಮಗಳನ್ನು ನಿರ್ಲಕ್ಷಿಸುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ ಬಜೆಟ್ ಬೆಂಬಲ ಇಲ್ಲದ ಯೋಜನೆಗಳನ್ನು ಘೋಷಿಸುವ ಗಿಮಿಕ್ ಮಾಡುತ್ತಿದೆ.
'ಪವರ್' ಕಳೆದುಕೊಂಡ ಡಿಕೆಶಿ: ಎಚ್.ಡಿ ರೇವಣ್ಣ ಮಡಿಲಿಗೆ ಇಂಧನ ಖಾತೆ! – EBM News Kannada
'ಪವರ್' ಕಳೆದುಕೊಂಡ ಡಿಕೆಶಿ: ಎಚ್.ಡಿ ರೇವಣ್ಣ ಮಡಿಲಿಗೆ ಇಂಧನ ಖಾತೆ!
By Reporter On Jun 2, 2018
ಬೆಂಗಳೂರು: ಮೇ 19 ರಂದು ಬಿಜೆಪಿ ಮುಖಂಡ ಬಿ,ಎಸ್ ಯಡಿಯೂರಪ್ಪ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಲು ವಿಫಲವಾದರು.
ಆ ಸಮಯದಲ್ಲಿ ಡಿಕೆ ಶಿವಕುಮಾರ್ ಕಾಂಗ್ರೆಸ್ ನ ಹೀರೋ ಆಗಿದ್ದರು. ಜೊತೆಗೆ ಟ್ರಬಲ್ ಶೂಟರ್ ಎಂದೇ ಪರಿಗಣಿಸಲ್ಪಟ್ಟಿದ್ದರು. ಆದರೆ ಕಳೆದ ಕೆಲವು ದಿನಗಳಿಂದ ಒಕ್ಕಲಿಗರ ಪ್ರಬಲ ಮುಖಂಡರಾಗಿರುವ ಡಿಕೆ ಶಿವಕುಮಾರ್ ಬಲಹೀನರಾದಂತೆ ಕಾಣುತ್ತಿದ್ದಾರೆ.
ಬಿಜೆಪಿಯ ಕುದುರೆ ವ್ಯಾಪಾರದಿಂದ ಕಾಂಗ್ರೆಸ್ ಶಾಸಕರನ್ನು ರಕ್ಷಿಸಲು ಡಿ,ಕೆ ಶಿವಕುಮಾರ್ ಪ್ರಮುಖ ಪಾತ್ರ ವಹಿಸಿದ್ದರು. ಹೀಗಿದ್ದರು ಸಮ್ಮಿಶ್ರ ಸರ್ಕಾರದಲ್ಲಿ ಅವರಿಗೆ ಇಂಧನ ಖಾತೆ ನೀಡಲು ನಿರಾಕರಿಸಲಾಗಿದೆ. ಇಂಧನ ಖಾತೆ ಮರಳಿ ಪಡೆಯಲು ಶಿವಕುಮಾರ್ ಪಟ್ಟ ಪ್ರಯತ್ನ ವ್ಯರ್ಥವಾಗಿದೆ. ಇಂಧನ ಖಾತೆ ಜೆಡಿಎಸ್ ಪಾಲಾಗಿದ್ದು, ಮುಖ್ಯಮಂತ್ರಿ ಕುಮಾರ ಸ್ವಾಮಿ ಸಹೋದರ ಎಚ್.ಡಿ ರೇವಣ್ಣ ಆ ಖಾತೆ ವಹಿಸಿಕೊಳ್ಳುವ ಸಾಧ್ಯತೆಯಿದೆ.
ಇಂಧನ ಖಾತೆಗಾಗಿ ಕಳೆದ ಕೆಲವು ದಿನಗಳಿಂದ ರೇವಣ್ಣ ಮತ್ತು ಡಿಕೆಶಿ ಲಾಬಿ ನಡೆಸಿದ್ದರು. ಆದರೆ ತಾವು ಯಾವುದೇ ಸ್ಥಾನಕ್ಕಾಗಿ ಲಾಬಿ ನಡೆಸಿಲ್ಲ ಎಂದು ಡಿಕೆಶಿ ಹೇಳಿದ್ದಾರೆ, ಆಧರೆ ಅವರು ಇಂಧನ ಖಾತೆ ಪಡೆಯಲು ಹಲವು ರೀತಿಯ ಪ್ರಯತ್ನ ಪಟ್ಟಿದ್ದರು ಎಂದು ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ.
ಹಣಕಾಸು ಖಾತೆ ಜೆಡಿಎಸ್ ಗೆ ಎಂದು ತೀರ್ಮಾನವಾಗಿತ್ತು, ಆದರೆ ಶುಕ್ರವಾರ ಮಧ್ಯಾಹ್ನದವರೆಗೂ ಇಂಧನ ಖಾತೆ ಯಾರಿಗೆ ಎಂಬ ಗೊಂದಲವಿತ್ತು, ಆದರೆ ಅಂತಿಮವಾಗಿ ರಾಹುಲ್ ಗಾಂಧಿ ಮಧ್ಯಸ್ಥಿಕೆಯಿಂದ ಸಮಸ್ಯೆ ಬಗೆಹರಿದಿದೆ.
ಇಂಧನ ಖಾತೆ ಸಿಗದಿದ್ದಕ್ಕೆ ಶಿವಕುಮಾರ್ ಮುಖದಲ್ಲಿ ಅಸಮಾಧಾನ ಎದ್ದು ಕಾಣುತ್ತಿತ್ತು. ಮಾಧ್ಯಮದವರು ಈ ಸಂಬಂಧ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರು ಅದನ್ನು ನಿಬಾಯಿಸುವುದಾಗಿ ತಿಳಿಸಿದ್ದಾರೆ,ತಮ್ಮ ಅಸಮಾಧಾನವನ್ನು ಪಕ್ಷದ ಹಿರಿಯ ಮುಖಂಜಡರಿಗೆ ರವಾನಿಸಿದ್ದಾರೆ ಎನ್ನಲಾಗಿದೆ,
ಸ್ಪೀಕರ್ ಮುಂದೆ ವಿಚಾರಣೆಗೆ ಅತೃಪ್ತ ಶಾಸಕರು ಗೈರು | Karnataka political crisis rebel mlas decided not to attend before speaker - Kannada Oneindia
| Updated: Tuesday, July 23, 2019, 11:28 [IST]
ಬೆಂಗಳೂರು, ಜುಲೈ 23: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ನೀಡಿರುವ ದೂರಿನ ಅನ್ವಯ ಇಂದು ವಿಚಾರಣೆಗೆ ಹಾಜರಾಗುವಂತೆ ಸ್ಪೀಕರ್ ನೀಡಿರುವ ಸೂಚನೆಗೆ ಕಾಲಾವಕಾಶ ನೀಡುವಂತೆ ಅತೃಪ್ತ ಶಾಸಕರು ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಮಂಗಳವಾರ ಬೆಳಿಗ್ಗೆ 11 ಗಂಟೆ ಒಳಗೆ ತಮ್ಮ ಮುಂದೆ ಹಾಜರಾಗುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರು 15 ಮಂದಿ ಅತೃಪ್ತ ಶಾಸಕರಿಗೆ ನೋಟಿಸ್ ನೀಡಿದ್ದರು.
ಮಂಗಳವಾರ ಸಂಜೆ 6 ಗಂಟೆಗೆ ವಿಶ್ವಾಸಮತಕ್ಕೆ ಮುಹೂರ್ತ ಫಿಕ್ಸ್‌
ಆದರೆ, ಮುಂಬೈನಲ್ಲಿರುವ ಹಾಗೂ ರಾಜ್ಯದಲ್ಲಿ ಇದ್ದೂ ಸದನಕ್ಕೆ ಗೈರು ಹಾಜರಾಗಿರುವ ಎಲ್ಲ ಶಾಸಕರೂ ಸ್ಪೀಕರ್ ಎದುರು ವಿಚಾರಣೆಗೆ ಹಾಜರಾಗದೆ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಖುದ್ದು ಹಾಜರಾಗಲು ನಾಲ್ಕು ವಾರಗಳ ಸಮಯ ಬೇಕು ಎಂದು ಅವರು ಪತ್ರ ಬರೆದು ಕೋರಿದ್ದಾರೆ.
ಒಂದು ವೇಳೆ ತಮ್ಮ ಮನವಿಯನ್ನು ಸ್ಪೀಕರ್ ಪುರಸ್ಕರಿಸದೆ ಹೋದರೆ ಕಾನೂನು ಹೋರಾಟಕ್ಕೂ ಅವರು ಸಿದ್ಧರಾಗಿದ್ದಾರೆ ಎಂದು ವರದಿಯಾಗಿದೆ.
ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದೇವೆ
ನಾವು ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನಮ್ಮ ರಾಜೀನಾಮೆಯನ್ನು ಶೀಘ್ರವೇ ಅಂಗೀಕಾರ ಮಾಡುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದೇವೆ. ಈ ನಡುವೆ ನಮ್ಮ ಪಕ್ಷದ ನಾಯಕರು ನಮ್ಮನ್ನು ಅನರ್ಹಗೊಳಿಸುವಂತೆ ನಿಮಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನುವುದು ಗೊತ್ತಾಗಿದೆ ಎಂದು ಪತ್ರದಲ್ಲಿ ಬರೆದಿದ್ದಾರೆ.
ನಾಲ್ಕು ವಾರಗಳ ಸಮಯ ಬೇಕು
ಆದರೆ, ನಮ್ಮನ್ನು ಅನರ್ಹತೆಗೊಳಿಸುವ ಸಂಬಂಧ ಪಕ್ಷದ ಕಡೆಯಿಂದ ನಮಗೆ ಯಾವುದೇ ನೋಟಿಸ್ ಅಥವಾ ಮಾಹಿತಿ ಬಂದಿಲ್ಲ. ಕೆಲವು ಅನಿವಾರ್ಯ ಕಾರಣಗಳಿಂದ ನಾವು ಹೊರಗೆ ಇದ್ದೇವೆ. ನಿಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲು ಕನಿಷ್ಠ ನಾಲ್ಕು ವಾರಗಳ ಸಮಯ ಬೇಕು ಎಂದು ಕೋರಿದ್ದಾರೆ. ಅರ್ಜಿ ಪ್ರಕ್ರಿಯೆ ನಡೆಸಲು ಕನಿಷ್ಠ ಏಳು ದಿನಗಳ ಸಮಯ ಬೇಕು. ನೀವು ಅವಸರ ಮಾಡುತ್ತಿದ್ದೀರಿ. ಕಾಂಗ್ರೆಸ್‌ನ ಅರ್ಜಿಯ ಪ್ರತಿ ಕೈಗೆ ಸಿಕ್ಕ ಬಳಿಕ ವಿಚಾರಣೆಗೆ ಹಾಜರಾಗುತ್ತೇವೆ ಎಂದು ಹೇಳಿದ್ದಾರೆ.
ಶಾಸಕರ ಅನರ್ಹತೆಗೆ ದೂರು
ಕಾಂಗ್ರೆಸ್‌ನ 12 ಮತ್ತು ಜೆಡಿಎಸ್‌ನ 3 ಅತೃಪ್ತ ಶಾಸಕರ ವಿರುದ್ಧ ಎರಡೂ ಪಕ್ಷಗಳ ನಾಯಕರು ಸ್ಪೀಕರ್‌ಗೆ ದೂರು ನೀಡಿದ್ದರು. ಕಾಂಗ್ರೆಸ್‌ ಪಕ್ಷೇತರ ಶಾಸಕ ಶಂಕರ್ ವಿರುದ್ಧವೂ ದೂರು ನೀಡಿತ್ತು. ಜುಲೈ 18ರಂದು ಈ ನೋಟಿಸ್ ನೀಡಲಾಗಿತ್ತು. ಪಕ್ಷದ ವಿಪ್‌ಅನ್ನು ಉಲ್ಲಂಘಿಸಿ ಸದನಕ್ಕೆ ಗೈರಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಸ್ಪೀಕರ್ ಅವರನ್ನು ಕರೆಸಿ ವಿಚಾರಣೆಗೆ ಒಳಪಡಿಸಲಿ ತೀರ್ಮಾನಿಸಿದ್ದಾರೆ. ಅದಕ್ಕಾಗಿ ಸ್ಪೀಕರ್ ಕಚೇರಿಯಿಂದ ನೋಟಿಸ್ ಜಾರಿಮಾಡಲಾಗಿತ್ತು.
ಸುಪ್ರೀಂಕೋರ್ಟ್ ತೀರ್ಪಿನ ಮೇಲೆ ಕಣ್ಣು
ಇತ್ತ ತಮ್ಮ ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆ ಎಂದು ಅತೃಪ್ತ ಶಾಸಕರು ಸುಪ್ರೀಂಕೋರ್ಟ್‌ಗೆ ಅರ್ಜಿಸಲ್ಲಿಸಿದ್ದರೆ. ಸುಪ್ರೀಂಕೋರ್ಟ್‌ನ ಆದೇಶದಿಂದ ಶಾಸಕಾಂಗ ಪಕ್ಷದ ನಾಯಕರ ಅಧಿಕಾರ ಮೊಟಕುಗೊಳ್ಳುತ್ತಿದೆ. ಆದ್ದರಿಂದ ವಿಪ್ ಕುರಿತಂತೆ ಸ್ಪಷ್ಟೀಕರಣ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಅವರು ಸದನದಲ್ಲಿ ಎತ್ತಿದ್ದ ಕ್ರಿಯಾಲೋಪದ ಬಗ್ಗೆ ರೂಲಿಂಗ್ ನೀಡಿದ್ದ ಸ್ಪೀಕರ್, ಸದಸ್ಯರಿಗೆ ವಿಪ್ ನೀಡುವುದು ಶಾಸಕಾಂಗ ಪಕ್ಷದ ನಾಯಕರ ಹಕ್ಕು ಎಂದು ಹೇಳಿದ್ದರು.